ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: 2026-27ನೇ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತರಾಮನ್ ಮಂಡಿಸುತ್ತಿದ್ದು, ಬಜೆಟ್ ನಲ್ಲಿ ಮೆಡಿಸನ್ ವಿಚಾರಕ್ಕೆ ಸಮಾಧಾನಕರ ವಿಚಾರ ತಿಳಿಸಿದ್ದಾರೆ. ಅದರಲ್ಲೂ ಕ್ಯಾನ್ಸರ್ ಮತ್ತು ಸಕ್ಕರೆ ರೋಗಕ್ಕೆ ಸಂಬಂಧಿಸಿದ ಔಷಧಗಳ ಬೆಲೆ ಇಳಿಕೆಯಾಗಲಿರುವ ಸುದ್ದಿಯನ್ನು ನೀಡಿದ್ದಾರೆ. ಗಂಭೀರ ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ತಗ್ಗಿಸುವ ಮತ್ತು ಆರೋಗ್ಯ ಸೇವೆಯನ್ನು ಎಲ್ಲರಿಗೂ ಕೈಗೆಟಕುವಂತೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.
ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆ ಹಾಗೂ ದಿನೇ ದಿನೇ ಹೆಚ್ಚುತ್ತಿರುವ ಸಕ್ಕರೆ ಕಾಯಿಲೆಯ ಔಷಧಗಳ ಬೆಲೆ ಇಳಿಕೆಯಾಗುತ್ತಿರುವುದು ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಆರ್ಥಿಕ ನೆರವು ನೀಡಲಿದೆ. ದೇಶದಲ್ಲಿ ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆಯ ಔಷಧಗಳನ್ನು ಅಗ್ಗವಾಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.
ಇನ್ನು ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆಯ ಔಷಧಗಳ ಮೇಲಿನ ಜಿಎಸ್ಟಿ ದರವನ್ನು ಇಳಿಕೆ ಮಾಡಿರುವುದು ಬೆಲೆ ಇಳಿಕೆಗರ ಪ್ರಮುಖ ಕಾರಣವಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಕೆಲವು ಪ್ರಮುಖ ಔಷಧಗಳ ಆಮದು ಸುಂಕದಲ್ಲಿ ರಿಯಾಯಿತಿ ನೀಡಲಾಗಿದೆ. ದೇಶಿಯವಾಗಿ ಔಷಧಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರಿಂದ ಅದೆಷ್ಟೊ ಜನಕ್ಕೆ ಸಾಕಷ್ಟು ಸಹಾಯವಾಗಲಿದೆ. ಯಾಕಂದ್ರೆ ಕ್ಯಾನ್ಸರ್ ರೋಗಕ್ಕೆ ಬೇಕಾದ ಔಷಧ ತುಂಬಾ ದುಬಾರಿಯಾಗಿದೆ. ಹೀಗಾಗಿ ಮಧ್ಯಮವರ್ಗದವರಿಗೆ ಆಸ್ಪತ್ರೆ ವೆಚ್ಚ ಭರಿಸುವುದೇ ಕಷ್ಟಕರವಾಗಿತ್ತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್