Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯುವತಿ ಮೇಲೆ ನಾಯಿಯಿಂದ ಬರ್ಬರ ದಾಳಿ! 

---Advertisement---

ಬೆಂಗಳೂರಿನಲ್ಲಿ ವಾಕಿಂಗ್‌ಗೆ ಹೋಗಿದ್ದ ಮಹಿಳೆಯ ಮೇಲೆ ಸಾಕು ನಾಯಿ ದಾಳಿ ಮಾಡಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿದೆ‌. ಜನವರಿ 26 ರಂದು ಕರ್ನಾಟಕದ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಬೆಳಿಗ್ಗೆ 6:54 ಕ್ಕೆ ದಾಳಿ ನಡೆದಿದೆ.ಸಾಕು ನಾಯಿಯೊಂದು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡಿದೆ. ಆಕೆಯ ಕುತ್ತಿಗೆ, ಮುಖ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕೆಯ ಮುಖ ಮತ್ತು ಕುತ್ತಿಗೆಗೆ 50 ಕ್ಕೂ ಹೆಚ್ಚು ಹೊಲಿಗೆಗಳು ಹಾಕಲಾಗಿದೆ. ಆದರೆ ಈಗ ಅಪಾಯದಿಂದ ಪಾರಾಗಿದ್ದಾಳೆ.ನಾಯಿಯ ಮಾಲೀಕರ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ದೂರು ದಾಖಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ನಾಯಿ ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದುಕೊಂಡಿತು. ಸಹಾಯ ಮಾಡಲು ಪ್ರಯತ್ನಿಸಿದ ವ್ಯಕ್ತಿಯ ಮೇಲೂ ಅದು ದಾಳಿ ಮಾಡಿತು ಎಂದಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯು ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಲ್ಲಿ ಆತಂಕವನ್ನುಂಟುಮಾಡಿದ್ದು, ಈಗ ಅವರು ತಮ್ಮ ಸುರಕ್ಷತೆಯ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ.

ಕಳೆದ ಗುರುವಾರ ರಾಜ್ಯಾದ್ಯಂತ 6 ಜನರಿಗೆ ನಾಯಿಗಳು ಕಚ್ಚಿವೆ. ಬೆಳಗಾವಿಯಲ್ಲಿ ಮನೆಗೆ ಮರಳುತ್ತಿದ್ದ ವ್ಯಕ್ತಿಯ ಮೇಲೆ ನಾಯಿಗಳು ದಾಳಿ ನಡೆಸಿವೆ. ಬೆಂಗಳೂರು ದಕ್ಷಿಣದಲ್ಲಿ ಬೀದಿ ನಾಯಿಗಳು 6 ವರ್ಷದ ಬಾಲಕಿಯನ್ನು ಕೊಂದಿವೆ. ಕಲಬುರಗಿಯಲ್ಲಿ ನಾಲ್ವರು ಶಾಲಾ ಬಾಲಕಿಯರ ಮೇಲೆ ದಾಳಿ ನಡೆಸಿ ಗಾಯಗೊಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...