ಸುದ್ದಿಒನ್, ಬೆಂಗಳೂರು, ಫೆಬ್ರವರಿ. 06 : ಇಂದು ಬೆಳ್ಳಂಬೆಳಿಗ್ಗೆ ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 40 ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಬೆಂಗಳೂರು ಮತ್ತು ತುಮಕೂರು ಹೆದ್ದಾರಿಯ ನಡುವಿನ ನೆಲಮಂಗಲ ಬಳಿಯ ಹನುಮಂತಪುರ ಗೇಟ್ ಬಳಿ ಈ ಘಟನೆ ಸಂಭವಿಸಿದೆ. ಬಸ್ ರಸ್ತೆ ಬದಿಯ ಕಂದಕಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತು. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟ ಕರಕಲಾಗಿದೆ. ಬಸ್ ನಲ್ಲಿದ್ದ ಲಗೇಜ್, ಬೆಲೆಬಾಳುವ ಬಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಗೆ ನಿರ್ದಿಷ್ಟವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ನೆಲಮಂಗಲ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ನೆಲಂಮಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.










