ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿ ದಾಖಲೆ ಬರೆದಿರುವ ಸಿದ್ದರಾಮಯ್ಯ, ಇದೀಗ ದಾಖಲೆಯ ಬಜೆಟ್ ಮಂಡಿಸೋದಕ್ಕೂ ರೆಡಿಯಾಗಿದ್ದಾರೆ. ಈ ಬಾರಿಯ ಬಜೆಟ್ ಮಂಡನೆಯ ವಿಚಾರಕ್ಕೆ ಸಿದ್ದರಾಮಯ್ಯ ಅವರ ಮುಂದೆಯೂ ಸಾಕಷ್ಟು ಸವಾಲುಗಳು ಇದಾವೆ. 17ನೇ ಬಜೆಟ್ ಮಂಡಿಸಲು ರೆಡಿಯಾಗಿರುವ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸರ್ಕಾರದ ಹೊಸ ವಿಕಸಿತ ಭಾರತ – ಉದ್ಯೋಗ ಮತ್ತು ಜೀವನೋಪಾಯ ಗ್ಯಾರಂಟಿ ಮಿಷನ್ ಯೋಜನೆಗೆ ದೇಶ ವ್ಯಾಪಿಯಾಗಿ 95,692 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
* ಇದರ ಜೊತೆಗೆ ಯುಪಿಎ ಸರ್ಕಾರ ಮನ್ರೆರವಾ ಯೋಜನೆಗೂ ಹಣ ಮೀಸಲಿಟ್ಟಿರುವ ಹಿನ್ನಲೆಯಲ್ಲಿ, ಹೊಸ ವಿಬಿ ಜಿ ರಾಮ್ ಜಿ ಯೋಜನೆಯನ್ನು ತಿರಸ್ಕರಿಸುವ ಪಕ್ಷದ ನಿಲುವಿಗೆ ಬದ್ಧರಾದರೆ ವರ್ಷಕ್ಕೆ ಸುಮಾರು 4,800 ಕೋಟಿ ರೂಪಾಯಿ ಕೇಂದ್ರ ಅನುದಾನವನ್ನು ತಿರಸ್ಕರಿಸುವ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
* 6 ತಿಂಗಳಲ್ಲಿ ಹಂತ ಹಂತವಾಗಿ ಸ್ಥಗಿತಗೊಳ್ಳಲಿರುವ ಮನ್ರೇಗಾ ಯೋಜನೆಗೆ ಹಣ ಒದಗಿಸಬೇಕಾಗಿದೆ. ಮತ್ತೊಂದೆಡೆ ಸಂಸತ್ತಿನಲ್ಲಿ ವಿಧೇಯಕ ಅಂಗೀಕಾರವಾ್ ಬಳಿಕ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿರುವ ಎಬಿ ಜಿ ರಾಮ್ ಜಿ ಯೋಜನೆಗೆ ಅನುದಾನ ನೀಡಬೇಕೆ ಎಂಬುದರ ಕುರಿತು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.
* ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಈ ಯೋಜನೆಯನ್ನು ರದ್ದುಪಡಿಸುವಂತೆ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಇದನ್ನು “ಕಪ್ಪು ಕಾನೂನು” ಹಾಗೂ “ಬಡವರ ವಿರೋಧಿ ಕ್ರಮ” ಎಂದು ಕರೆಯುತ್ತಿದೆ. ಇದರ ಜತೆ, ರಾಜ್ಯ ವಿಧಾನಮಂಡಲ ಹೊಸ ಯೋಜನೆಯನ್ನು ತಿರಸ್ಕರಿಸಿ, ಮನ್ರೇಗಾ ಯೋಜನೆಯನ್ನು ಮುಂದುವರಿಸುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.
* ಕರ್ನಾಟಕವೂ ಮನ್ರೇಗಾಕ್ಕೆ ಬಜೆಟ್ ನಲ್ಲಿ ಅನುದಾನ ಒದಗಿಸುವುದರ ಜೊತೆಗೆ ವಿಬಿ-ಜಿ-ರಾಮ್-ಜಿ ಯೋಜನೆಗೂ ಹಣ ಮೀಸಲಿಡಬೇಕಾದ ಪರಿಸ್ಥಿತಿಯಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















