ಕುತೂಹಲ‌ ಮೂಡಿಸಿದ ಎಚ್‌ಡಿ ಕುಮಾರಸ್ವಾಮಿ, ಯತ್ನಾಳ್ ಭೇಟಿ!

1 Min Read

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಅನಿರೀಕ್ಷಿತ ಭೇಟಿ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ. ಹಾಗೂ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದ ವೇಳೆ ಇಬ್ಬರು ನಾಯಕರು ಮುಖಾಮುಖಿಯಾಗಿ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.ಈ ಮಾತುಕತೆ ಯಾವ ವಿಷಯದ ಬಗ್ಗೆ ಎಂಬ ಚರ್ಚೆ ರಾಜಕೀಯದಲ್ಲಿ ಗೊಂದಲ‌ಮೂಡಿಸಿದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಬ್ಬರೂ ಮಾತನಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಚರ್ಚೆಯ ಹಿಂದೆ ಯಾವುದೊ ರಾಜಕೀಯ  ವಿಷಯಗಳಿವೆಯೇ? ಅಥವಾ ಕೇವಲ ಕುಶಲ  ಮಾತುಕತೆಯೇ? ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ, ಇಬ್ಬರು ನಾಯಕರ ಮಧ್ಯೆ ನಡೆದ ಈ ಸಂಭಾಷಣೆ ಮುಂದಿನ ದಿನಗಳಲ್ಲಿ ಹೊಸ ರಾಜಕೀಯ ಬೆಳವಣಿಗೆ ಆಗಲಿದೆಯೇ ? ಎಂಬ ಗೊಂದಲ ರಾಜಕೀಯದಲ್ಲಿ ಉಂಟಾಗಿದೆ‌.

Share This Article