Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಉಪಚುನಾವಣೆ : ಎಸ್ ಎಸ್ ಮಲ್ಲಿಕಾರ್ಜುನ್ v/s ಜಮೀರ್ ಅಹ್ಮದ್..!

---Advertisement---

ದಾವಣಗೆರೆ: ಶಾಮನೂರು ಶಿವಶಂಕರಪ್ಪನವರು ನಿಧನರಾದ ನಂತರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ತಯಾರಿ ನಡೀತಾ ಇದೆ. ಆದರೆ ಟಿಕೆಟ್ ಗಾಗಿ ಇಬ್ಬರು ಸಚಿವರ ನಡುವೆ ಪೈಪೋಟಿ ಆರಂಭವಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ದೊಡ್ಡ ಪೈಪೋಟಿ ಎದುರಾಗಿದೆ.

ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆಯುವುದಕ್ಕೆ ಕಸರತ್ತನ್ನ ನಡೆಸ್ತಾ ಇದ್ದಾರೆ. ಮಲ್ಲಿಕಾರ್ಜುನ್ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಪ್ರಯತ್ನ ಪಡ್ತಾ ಇದ್ದರೆ, ಅಲ್ಪಸಂಖ್ಯಾತ ಮತಗಳು ಹೆಚ್ಚಾಗಿರುವ ಕಾರಣ ಜಮೀರ್ ಅಹ್ಮದ್ ತಮ್ಮ ಸಮುದಾಯಕ್ಕೆ ಟಿಕೆಟ್ ಕೊಡಿಸುವ ಪ್ರಯತ್ನದಲ್ಲಿದ್ದಾರೆ. ಈ ಸಂಬಂಧ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪ್ರತಿಕ್ರಿಯೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪಾಜಿ ಅವರು ಆಶೀರ್ವಾದ ಮಾಡಿದ್ದರು. ನಾನಿರುವವರೆಗೂ ಇದ್ದು ಆ ಬಳಿಕ ಮುಸ್ಲಿಂ ಸಮುದಾಯಕ್ಕೆ ಕೊಡಬೇಕು ಎಂಬುದನ್ನ ಹೇಳಿದ್ದಾರೆ ಎಂಬ ವಿಚಾರವನ್ನ ಮಾಧ್ಯಮದಲ್ಲಿ ನೋಡಿದೆ. ಆದರೆ ಈಗಿನ ಕಾಲದಲ್ಲಿ ನುಡಿದಂತೆ ನಡೆದುಕೊಳ್ಳುವವರು ಯಾರಿದ್ದಾರೆ..? ಗ್ರಾಮ ಪಂಚಾಯತಿ ಮೆಂಬರೇ ನಿಲ್ಲಲ್ಲ, ಕುರ್ಚಿಗೋಸ್ಕರ. ಹಾಗಾಗಿ ಆ ಮಾತು ಈಗ ಅಪ್ರಸ್ತುತ ಎನಿಸುತ್ತದೆ. ನಾನು ಕೂಡ ಬಹಳಷ್ಟು ಪರಿಶೀಲನೆ ಮಾಡಿದ್ದೀನಿ, ಆ ಕುಟುಂಬದವರ ಬಗ್ಗೆ ಹೇಳಿಕೆಯನ್ನು ಕೊಟ್ಟಿದ್ದೀನಿ. ಈಗಾಗಲೇ ಅವರ ಮನೆಯಲ್ಲಿ ಮಂತ್ರಿ, ಸಂಸದ, ಶಾಸಕರು ಇದ್ದ ಕಾರಣದಿಂದ ಒಬ್ಬರು ಅಲ್ಪಸಂಖ್ಯಾತರಿಗೆ ಕೊಡುವುದು ಉತ್ತಮ. ಯಾಕಂದ್ರೆ ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟು ಗೆದ್ದು ಬಂದಿದ್ದೀವಿ. ಅಲ್ಪಸಂಖ್ಯಾತರಿಗೆ ನೀಡಿದರೆ ನಾವೂ ಬೆಂಬಲವನ್ನು ಕೊಡ್ತೀವಿ, ಹಣಕಾಸಿನ ನೆರವನ್ನು ನೀಡ್ತೀವಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...