Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು-ಗೋವಾ ವಂದೇ ಭಾರತ್ ರೈಲು ಪ್ರಾರಂಭ: ವೇಳಾಪಟ್ಟಿ ಇಲ್ಲಿದೆ

---Advertisement---

ಪ್ರವಾಸ ಹೋಗುವ ಜನರಿಗೆ ಭಾರತೀಯ ರೈಲ್ವೆ ಗುಡ್ ನ್ಯೂಸ್ ನೀಡಲಿದೆ.  ಬೆಂಗಳೂರು-ಗೋವಾ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ತಯಾರಿ ನಡೆಸಿದ್ದು, ಕರಡು ವೇಳಾಪಟ್ಟಿಯನ್ನು ಸಹ ತಯಾರು ಮಾಡಲಾಗಿದೆ.ಈ ಮಾರ್ಗದ ಪ್ರಯಾಣ 13 ಗಂಟೆಗಳು ಎಂದು ಅಂದಾಜಿಸಲಾಗಿದೆ.

ಯಶವಂತಪುರ-ಮಡಗಾಂವ್, ಮಡಗಾಂವ್-ಯಶವಂತಪುರ ನಡುವೆ ರೈಲು ಸಂಚಾರವನ್ನು ನಡೆಸಲಿದೆ. ಎರಡೂ ಕಡೆಯಿಂದ ರೈಲು ಮುಂಜಾನೆ ಹೊರಟು ಸಂಜೆ ತಲುಪುವಂತೆ ವೇಳಾಪಟ್ಟಿ ತಯಾರು ಮಾಡಲಾಗುತ್ತಿದೆ. ರೈಲು ಪಡೀಲ್ ಬೈಪಾಸ್ ಮೂಲಕ ಸಂಚಾರ ನಡೆಸುವಂತೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಕರಡು ವೇಳಾಪಟ್ಟಿ ಪ್ರಕಾರ ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲು ಯಶವಂತಪುರದಿಂದ ಬೆಳಗ್ಗೆ 6.05ಕ್ಕೆ ಹೊರಡಲಿದೆ. ಪಡೀಲ್‌ಗೆ 2 ಗಂಟೆ, ಮಡಗಾಂವ್‌ಗೆ ಸಂಜೆ 7 ಗಂಟೆಗೆ ತಲುಪಲಿದೆ.
ಮಡಗಾಂವ್-ಯಶವಂತಪುರ ನಡುವಿನ ರೈಲು ಮಡಗಾಂವ್‌ನಿಂದ ಬೆಳಗ್ಗೆ 5.30ಕ್ಕೆ ಹೊರಡಲಿದೆ. ಪಡೀಲ್‌ಗೆ 11 ಗಂಟೆಗೆ ಆಗಮಿಸಲಿದ್ದು, ಯಶವಂತಪುರಕ್ಕೆ ಸಂಜೆ 6.40ಕ್ಕೆ ತಲುಪಲಿದೆ. ಈ ಮಾರ್ಗದ ರೈಲು ಪ್ರಯಾಣದ ಅವಧಿ 13.10 ಗಂಟೆಗಳು ಎಂದು ಅಂದಾಜಿಸಲಾಗಿದೆ

ಸದ್ಯದ ಮಾಹಿತಿ ಪ್ರಕಾರ ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಇಲಾಖೆ ತಯಾರಿ ನಡೆಸಿದೆ. ಈ ಕುರಿತು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಪರಿಶೀಲನೆ ನಡೆಸುತ್ತಿದ್ದಾರೆ.ಈ ಮಾರ್ಗದಲ್ಲಿ ವಂದೇ ಭಾರತ್ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿದ ಬಳಿಕ ವೇಳಾಪಟ್ಟಿ ಅಂತಿಮಗೊಳಿಸಲು ಇಲಾಖೆ ಮುಂದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now