ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
22 ವರ್ಷದ ಯುವಕ ಮತ್ತು ಆತನ ಗೆಳತಿ ಬೆಂಗಳೂರಿನಿಂದ ಪ್ರಯಾಣಿಸಲು ಖಾಸಗಿ ಸ್ಲೀಪರ್ ಬಸ್ನಲ್ಲಿ ಡಬಲ್ ಬರ್ತ್ಗಳನ್ನು ಬುಕ್ ಮಾಡಿದ್ದರು. ಆದರೆ ಬಸ್ ಹತ್ತಿದ ನಂತರ ಕಂಡಕ್ಟರ್ ಇವರಿಬ್ಬರನ್ನು ಒಟ್ಟಿಗೆ ಕುಳಿತುಕೊಳ್ಳದಂತೆ ತಡೆದಿದ್ದಾರೆ. ಇಬ್ಬರೂ ವಯಸ್ಕರಾಗಿದ್ದರೂ ಮತ್ತು ಅಧಿಕೃತ ಟಿಕೆಟ್ ಹೊಂದಿದ್ದರೂ, ಕಂಡಕ್ಟರ್ ಇಬ್ಬರನ್ನು ಪ್ರತ್ಯೇಕ ಸೀಟುಗಳಲ್ಲಿ ಮಲಗುವಂತೆ ಒತ್ತಾಯಿಸಿದ್ದಾರೆ.ನಿಮ್ಮ ಪೋಷಕರಿಗೆ ಫೋನ್ ಮಾಡಿ” ಇಲ್ಲವೆಂದರೆ “ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಕಂಡಕ್ಟರ್ ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಜೋಡಿ, ವಿವಾದ ಬೇಡವೆಂದು ದೂರ ಕುಳಿತಿದ್ದಾರೆ.
ಇನ್ನು ಮತ್ತೊಂದೆಡೆ ಆಂಧ್ರಪ್ರದೇಶದ ಈ ಪ್ರೇಮಿಗಳು ಹೈದರಾಬಾದ್ನಲ್ಲಿ ವಾಸಿಸುತ್ತಿದ್ದರು. ಹೈದರಾಬಾದ್ನಿಂದ ಬಂದರ್ಗೆ ಹೋಗಲು ಖಾಸಗಿ ಟ್ರಾವೆಲ್ಸ್ಗೆ ಸೇರಿದ ಎಸಿ ಸ್ಲೀಪರ್ ಬಸ್ನಲ್ಲಿ ಪಕ್ಕಪಕ್ಕದ ಸೀಟುಗಳನ್ನು ಬುಕ್ ಮಾಡಿದ್ದರು.
ಬಸ್ ಹತ್ತುವಾಗ ಒಬ್ಬ ಹುಡುಗ ಮತ್ತು ಒಬ್ಬ ಹುಡುಗಿ ಪಕ್ಕಪಕ್ಕದ ಸೀಟಿನಲ್ಲಿ ಮಲಗಿ ಪ್ರಯಾಣಿಸಲು ಮುಂದಾದಾಗ ಡ್ರೈವರ್ ಅಡ್ಡಿಪಡಿಸಿದರು. ಆದರೆ ಇವರಿಬ್ಬರೂ ಒಟ್ಟಿಗೇ ಇರಬೇಕೆಂದು ಪಟ್ಟು ಹಿಡಿದರು, ಆದರೆ ಡ್ರೈವರ್ ನಿಯಮ ಮೀರಿ ಅವಕಾಶ ನೀಡಲು ನಿರಾಕರಿಸಿದರು. ಈ ವೇಳೆ ಡ್ರೈವರ್ ಮತ್ತು ಜೋಡಿಯ ನಡುವೆ ಜೋರಾದ ಗಲಾಟೆ ನಡೆಯಿತು. ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಡ್ರೈವರ್ ಪರವಾಗಿ ಮಾತನಾಡಿದ್ದರಿಂದ ಬೇರೆ ದಾರಿಯಿಲ್ಲದೆ ಜೋಡಿ ದೂರದೂರದ ಸೀಟುಗಳಲ್ಲಿ ಕುಳಿತು ಪ್ರಯಾಣ ಬೆಳೆಸಿದರು.
ಮಚಿಲಿಪಟ್ಟಣಂ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಮತ್ತೆ ಗಲಾಟೆ ಶುರು ಮಾಡಿದರು. ಯುವಕ, ಬಸ್ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದಾನೆ. ಚಿಲಕಪುಡಿ ಸೆಂಟರ್ ಬಳಿ ಡ್ರೈವರ್ಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕುರಿತು ಬಸ್ ಡ್ರೈವರ್ ಪೊಲೀಸ್ಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್