Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರಗ್ರಹಣದ ಸಂಧರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಶಾಸ್ತ್ರ ಹೀಗೆ ಹೇಳುತ್ತದೆ

---Advertisement---

ಹೋಳಿ ಮಾಸದ ಈ ಪೌರ್ಣಮಿಯಂದು ಬರುವ ಚಂದ್ರಗ್ರಹಣವು ವಿಶೇಷ ಮಹತ್ವವನ್ನು ಹೊಂದಿದೆ.ನೆರಳು ಚಂದ್ರನನ್ನು ಆವರಿಸುವ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಆದರೆ ಭಾರತೀಯ ಸಂಸ್ಕೃತಿಯಲ್ಲಿ ಇದು ಕೇವಲ ಒಂದು ಖಗೋಳ ಘಟನೆಯಲ್ಲ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಏನೆಲ್ಲ ಇದೆ ನೋಡಿ.ಗ್ರಹಣದ ಆರಂಭಕ್ಕೆ ಸುಮಾರು 9 ಗಂಟೆಗಳ ಮುಂಚಿತವಾಗಿಯೇ ‘ಸೂತಕ ಅವಧಿ’ ಆರಂಭವಾಗುತ್ತದೆ. ಈ ಅವಧಿಯಲ್ಲಿ ದೇವಾಲಯಗಳ ಬಾಗಿಲುಗಳು ಮುಚ್ಚಲ್ಪಡುತ್ತವೆ, ಮಂಗಳ ಕಾರ್ಯಗಳು ಸ್ಥಗಿತಗೊಳ್ಳುತ್ತವೆ.

ಶಾಸ್ತ್ರಗಳ ಪ್ರಕಾರ, ಗ್ರಹಣ ಕಾಲದಲ್ಲಿ ಕೈಗೊಳ್ಳುವ ಪ್ರಯಾಣವು ಅಡೆತಡೆಗಳಿಂದ ಕೂಡಿರಬಹುದು ಅಥವಾ ಮನಸ್ಸಿನಲ್ಲಿ ಅನಗತ್ಯ ಆತಂಕವನ್ನು ಉಂಟುಮಾಡಬಹುದು. ಒಂದು ವೇಳೆ ಪ್ರಯಾಣ ಅನಿವಾರ್ಯವಾದರೆ ಏನು ಮಾಡಬೇಕು? ಅಂತಹ ಸಂದರ್ಭಗಳಲ್ಲಿ ಧರ್ಮಗ್ರಂಥಗಳು ಭಕ್ತಿಯ ಮಾರ್ಗವನ್ನು ಸೂಚಿಸುತ್ತವೆ. ಮನೆಯಿಂದ ಹೊರಡುವ ಮುನ್ನ ಇಷ್ಟದೈವವನ್ನು ಸ್ಮರಿಸಿ, ಮನಸ್ಸಿನಲ್ಲಿ ಧನಾತ್ಮಕ ಆಲೋಚನೆಗಳನ್ನು ಇಟ್ಟುಕೊಳ್ಳಬೇಕು. ಪ್ರಯಾಣ ಮುಗಿಸಿ ಮನೆಗೆ ಬಂದ ನಂತರ ಸ್ನಾನ ಮಾಡಿ, ಶುಭ್ರ ವಸ್ತ್ರ ಧರಿಸಿ ಪ್ರಾರ್ಥನೆ ಸಲ್ಲಿಸುವುದರಿಂದ ಗ್ರಹಣದ ನಕಾರಾತ್ಮಕ ಪ್ರಭಾವಗಳು ಕಡಿಮೆಯಾಗುತ್ತವೆ ಎಂಬ ವಿಶ್ವಾಸವಿದೆ.

ಗ್ರಹಣ ಕಾಲದಲ್ಲಿ ಗರ್ಭಿಣಿ ಸ್ತ್ರೀಯರು ಮನೆಯಿಂದ ಹೊರಬರದೇ ಒಳಗಿರಬೇಕು. ಮಕ್ಕಳು ಆಟವಾಡಲು ಹೊರಹೋಗುವುದನ್ನು ತಪ್ಪಿಸಬೇಕು. ಇಂತಹ ಸಮಯದಲ್ಲಿ ಅನಾವತಗಳು ಸಂಭವಿಸುವ ಸಾಧ್ಯತೆ ಹೆಚ್ಚು. ದೊಡ್ಡವರು ಮಕ್ಕಳ ಪಕ್ಕದಲ್ಲಿ ಕುಳಿತು ಧ್ಯಾನ, ದೀಪ ಪೂಜೆಗಳನ್ನು ಮಾಡುವುದರಿಂದ ಬಹಳ ವಿಶೇಷ ಫಲ ದೊರೆಯುತ್ತದೆ

ಶಾಸ್ತ್ರ ಪ್ರಕಾರ ಕೆಲ ರಾಶಿಗಳಿಗೆ ಈ ಗ್ರಹಣ ಅತ್ಯಂತ ಶುಭಕರವಾಗಿರುತ್ತದೆ. ವಿಶೇಷವಾಗಿ ಮಿಥುನ, ತುಲಾ, ವೃಶ್ಚಿಕ ಮತ್ತು ಮೀನ ರಾಶಿಯವರಿಗೆ ಈ ಗ್ರಹಣ ಮಹಾ ಅನುಕೂಲಕರ ಫಲಗಳನ್ನು ನೀಡಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...