Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್ ಬೆನ್ನಲ್ಲೇ ಡಿಕೆಶಿ ಡಿನ್ನರ್ ಪಾರ್ಟಿ : ಯಾಕೀರಬಹುದು..?

---Advertisement---

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕದನ ನಿಲ್ಲುವಂತೆ ಕಾಣಿಸ್ತ ಇಲ್ಲ. ಎರಡೂವರೆ ವರ್ಷದ ಬಳಿಕ ಅಧಿಕಾರ ಹಸ್ತಾಂತರ ಆಗುತ್ತೆ ಅಂತ ಡಿಕೆ ಶಿವಕುಮಾರ್ ಕಾಯ್ತಾ ಇದ್ದರು. ಆದರೆ ಅದು ಕೂಡ ಅದ್ಯಾಕೋ ಆಗ್ಲೇ ಇಲ್ಲ. ಇನ್ನು ಸಿದ್ದರಾಮಯ್ಯ ಅವರು ದಾಖಲೆ ಬರೆದ ಬಳಿಕವಾದರೂ ಏನಾದ್ರೂ ಆಗುತ್ತೆ ಅಂದುಕೊಂಡಿದ್ರು ಅದು ಆಗ್ಲಿಲ್ಲ. ಇದೀಗ ಬಜೆಟ್ ಮಂಡನೆ ಬಳಿಕ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಇಟ್ಕೊಂಡಿದ್ದಾರೆ. ಆ ಬಗ್ಗೆ ಬಹಳಷ್ಟು ಚರ್ಚೆಗಳು ನಡೀತಾ ಇದೆ.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳಾಗಿದೆ. ಹೀಗಾಗಿ ಡಿನ್ನರ್ ಪಾರ್ಟಿಗೆ ಕರೆದಿದ್ದಾರೆ. ಮುಖ್ಯಮಂತ್ರಿ, ಎಂಎಲ್ಎ, ಎಂಎಲ್ಸಿಗಳು ಹೀಗೆ ಎಲ್ಲರನ್ನು ಕೂಡ ಪಾರ್ಟಿಗೆ ಆಹ್ವಾನಿಸಿದ್ದಾರೆ. ಮಾರ್ಚ್ 10ರಂದು ಔತಣಕೂಟದ ಆಯೋಜನೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಬೇಕು ಅಂತ ಡಿಕೆ ಶಿವಕುಮಾರ್ ಅವರಿಗೆ ಅಂದು ಕಾಲ್ ಬಂದಿತ್ತು. ಆಗ ಒಂದು ಗುಲಾಬಿ ಹೂವನ್ನು ತೆಗೆದುಕೊಂಡು ಹೋಗಿ ಸಿದ್ದರಾಮಯ್ಯ ಅವರಿಗೆ ನೀಡಿದ್ದರು. ಕೇಂದ್ರ ನನ್ನನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದೆ ಎಂದರು.

ಪರಮೇಶ್ವರ್ ಅವರನ್ನು ಹೊರತುಪಡಿಸಿದರೆ ಡಿಕೆ ಶಿವಕುಮಾರ್ ಹೆಚ್ಚಿನ ಕಾಲ ಅಧ್ಯಕ್ಷ ಸ್ಥಾನವನ್ನ ಅಲಂಕರಿಸಿದ್ದಾರೆ. ಇದಾದ ಮೇಲೆ ಮುಂದೇನು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದಕ್ಕೇನಾದರೂ ಈ ಡಿನ್ನರ್ ಪಾರ್ಟಿಯನ್ನ ಕರೆದಿದ್ದಾರಾ ಎಂಬ ಪ್ರಶ್ನೆಗಳು ಎಲ್ಲರಿಗೂ ಮೂಡುತ್ತಿದೆ. ಕಾಂಗ್ರೆಸ್ ನಲ್ಲಿ ಹಲವು ಸಭೆಗಳು ಕೂಡ ನಡೆಯುತ್ತಿವೆ‌. ಡಿಕೆ ಶಿವಕುಮಾರ್ ಪರವಾಗಿ ಒಂದಷ್ಟು ಶಾಸಕರು ಬೆಂಬಲವನ್ನು ಕೂಡ ನೀಡಿದ್ದಾರೆ‌. ಮಾರ್ಚ್ 6ನೇ ತಾರೀಖು ಬಜೆಟ್ ಮಂಡನೆಯಾಗುತ್ತಿದೆ. ಬಳಿಕ ಏನೆಲ್ಲಾ ಬದಲಾವಣೆಗಳು ನಡೆಯಬಹುದು ಎಂಬುದನ್ನ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now