ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪವಾಡ ಪುರುಷ ನೆಲೆಸಿರುವ ಐತಿಹಾಸಿಕ ಪ್ರಸಿದ್ಧವಾದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ದೊಡ್ಡ ಕರಥೋತ್ಸವ ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮ ನಡೆಯಿತು.
ಬೆಳಗ್ಗೆಯಿಂದಲೇ ಬಣ್ಣ ಬಣ್ಣದ ಬಾವುಟಗಳಿಂದ ರಥವನ್ನು ಸಿಂಗಾರ ಮಾಡಲಾಗಿತ್ತು. ಮಧ್ಯಾಹ್ನ 3ಕ್ಕೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಸಕಲ ಪೂಜಾ ವಿಧಿವಿಧಾನಗಳೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಿ ನಂತರ ಬಾವುಟ ರಾಜು ಪ್ರಕ್ರಿಯೆಯನ್ನು ನಡೆಸಲಾಯಿತು. ಮುಕ್ತಿ ಬಾವುಟ ಹರಾಜು ಪ್ರಕ್ರಿಯೆಯಲ್ಲಿ 32 ಲಕ್ಷಕ್ಕೆ ಶ್ರೀನಾಥ್ ಎನ್ನುವರು ಪಡೆದರು.. ಜನಸಾಗರದ ನಡುವೆ
ಭಕ್ತರು ಸಂಭ್ರಮದಿಂದ ರಥವನ್ನು ಎಳೆದರು. ರಥ ಸಾಗುವ ದಾರಿಯುದ್ದಕ್ಕೂ ಮಹಿಳೆಯರು, ಮಕ್ಕಳು ಬಾಳೆಹಣ್ಣು, ಕಾಳುಮೆಣಸು, ಬೆಲ್ಲದ ಚೂರನ್ನು ರಥಕ್ಕೆ ಹಾಕಿ ಹರಕೆ ಪೂರೈಸಿದರು. ಪಂಜು, ಕರಡಿ ಮಜಲು, ಡೊಳ್ಳು ವಾದ್ಯ ಹಾಗೂ ನಂದಿಕೋಲು ಕುಣಿತ ಆಕರ್ಷಿಸಿತು.
ದೊಡ್ಡ ರಥ ರಾಜ ಗಂಭೀರದಲ್ಲಿ ಸಾಗುತ್ತ ವೀರಭದ್ರನ ಓಣಿಗೆ ಬಂದಾಗ ಹರಕೆ ಹೊತ್ತ ನೂರಾರು ಯುವಕರು ಬೆಳಗ್ಗೆಯಿಂದಲೇ ಉಪವಾಸ ವ್ರತ ಕೈಗೊಂಡಿದ್ದರು. ಯುವಕರು ಶಸ್ತ್ರ ಪೂಜಾ ವಿಧಿಗಳನ್ನು ಕೈಗೊಂಡು, ಯುವಕರು ವೀರಭದ್ರ ಕುಣಿತ ಪ್ರದರ್ಶಿಸಿದರು. ಉತ್ಸವಕ್ಕೆ ಜನಪದ ಕಲಾತಂಡಗಳಾದ ಕೋಲಾಟ, ಬೊಂಬೆ ಕುಣಿತ, ಮೆರುಗು ತಂದುವು.
ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶಾಸಕ ಟ. ರಘುಮೂರ್ತಿ, ಜಿಲ್ಲಾಧಿಕಾರಿ ಕೆ ವೆಂಕಟೇಶ್ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಭಕ್ತರು ಇದ್ದರು. ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು..




