ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 06 : ತಾಲ್ಲೂಕಿನ
ನೇರಲಗುಂಟೆ ಬಳಿ ಬೈಕಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ನಾಯಕನಹಟ್ಟಿ ಜಾತ್ರೆಗೆ ತೆರಳಿದ್ದ ಇಬ್ಬರು ಯುವಕರು ಜಾತ್ರೆ
ಮುಗಿಸಿಕೊಂಡು ಚಳ್ಳಕೆರೆಗೆ ವಾಪಾಸು ಬರುವಾಗ ನೇರಲಗುಂಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಪ್ರಜ್ವಲ್ (22), ಅಭಿಷೇಕ್ (18) ಮೃತರು ಎಂದು ತಿಳಿದು ಬಂದಿದೆ. ನಾಯಕನಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




