ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 07 : ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಮಾದಿಗ ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿಯಿಂದ ಮಾ. 12 ರಂದು ಬೆಂಗಳೂರಿನಲ್ಲಿ ಮಾದಿಗರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಕ್ಕಾಗಿ ಮಾ.9 ರಂದು ಬೆಳಿಗ್ಗೆ 11 ಕ್ಕೆ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ.
ಮಾದಿಗ ಸಂಘಟನೆಗಳು, ದಲಿತ ಸಂಘಟನೆಗಳ ಮುಖಂಡರು, ಚಿಂತಕರು, ವಕೀಲರು, ನಿವೃತ್ತ ಸರ್ಕಾರಿ ನೌಕರರು, ಯುವಕರು, ಮಹಿಳೆಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಹಲೋ ಮಾದಿಗ ಚಲೋ ಬೆಂಗಳೂರು ರ್ಯಾಲಿಯನ್ನು ಯಶಸ್ವಿಗೊಳಿಸುವಂತೆ ಮಾದಿಗ ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹುಲ್ಲೂರು ಕುಮಾರಸ್ವಾಮಿ ವಿನಂತಿಸಿದ್ದಾರೆ.




