ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಜೊತೆಗೆ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಫೆಬ್ರವರಿ 17ರಂದೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಉಪ್ಪಾರಪೇಟೆಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಮೃತ ವ್ಯಕ್ತಿ.
ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯವರು. ಈ ಹಿಂದೆ ಚನ್ನಗಿರಿ ಶಾಸಜ ಬಸವರಾಜ್ ಶಿವಗಂಗಾ ಅವರ ಬಳಿಯೇ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದವರು. ಆದರೆ ಇರೋ ಬರೋ ಕಡೆಯಲ್ಲೆಲ್ಲಾ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಶಾಸಕರ ಬಳಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಕೆಲಸವನ್ನು ಕಳೆದುಕೊಂಡಿದ್ದರು. ಸ್ವಲ್ಪ ದಿನಗಳ ಹಿಂದಷ್ಟೇ ಪಿಎ ಆಗಿ ಕೆಲಸ ಬಿಟ್ಟಿದ್ದರಂತೆ. ಇದರ ನಡುವೆ ಅವರ ಹೆಂಡತಿಗೆ ಪ್ರತಿದಿನ ವಿಡಿಯೋ ಕಾಲ್ ಮಾಡುತ್ತಿದ್ದರಂತೆ. ನನಗೆ ಜೀವನ ಸಾಕಾಗಿದೆ ಎಂಬ ಮಾತನ್ನ ಹೇಳುತ್ತಿದ್ದರಂತೆ. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















