Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸದ್ಯದಲ್ಲಿಯೇ ಹೆಚ್ಚಾಗಲಿದೆ ಪೆಟ್ರೋಲ್ – ಡಿಸೇಲ್ ದರವೂ ಏರಿಕೆ..!

---Advertisement---

ಇರಾನ್ – ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಈಗಾಗಲೇ ಗ್ಯಾಸ್, ಅಡುಗೆ ಎಣ್ಣೆ ಬೆಲೆ ಏರಿಕೆಯಾಗಿದೆ. ಯುದ್ಧ ನಿಲ್ಲುವ ಯಾವ ಮುನ್ಸೂಚನೆಯೂ ಕಾಣಿಸ್ತಾ ಇಲ್ಲ. ಇದರ ನಡುವೆ ಪೆಟ್ರೋಲ್ – ಡಿಸೇಲ್ ದರವೂ ಏರಿಕೆಯಾಗುವ ಎಲ್ಲಾ ಸೂಚನೆಗಳು ಕಾಣಿಸುತ್ತಿವೆ. ಮಧ್ಯಪ್ರಾಚ್ಯದ ಯುದ್ಧದ ಎಫೆಕ್ಟ್ ನಿಂದ ಇಲ್ಲಿನ ಗ್ರಾಹಕರು ಕೂಡ ನಡುಗುವಂತೆ ಆಗಿದೆ.

ಅದರಲ್ಲೂ ಪೆಟ್ರೋಲ್ ಪ್ರತಿ ಲೀಟರ್ ಗೆ 22 ರೂಪಾಯಿ, ಡಿಸೇಲ್ 24 ರೂಪಾಯಿವರೆಗೂ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಾ ಇದೆ. ಈ ಮೂಲಕ ಪೆಟ್ರೋಲ್ ದರ 125 ರೂಪಾಯಿಗೆ, ಡಿಸೇಲ್ ದರ 115 ರೂಪಾಯಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಎಲ್ಲಾ ಡಿಸ್ಟ್ರಿಬ್ಯೂಟರ್ಸ್ ಗಳಿಗೂ ಈಗಾಗಲೇ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಪತ್ರವನ್ನು ಬರೆದಿದೆ. ಆ ಪತ್ರದಲ್ಲಿ ದರ ಏರಿಕೆಯ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಅಂದ್ರೆ ಯಾವ ಕ್ಷಣದಲ್ಲಾದರೂ ದರ ಏರಿಕೆಯಾಗಬಹುದು ಎಂಬ ಮಾಹಿತಿಯನ್ನು ಆ ಪತ್ರದ ಮೂಲಕ ನೀಡಲಾಗಿದೆ.

ಈಗಾಗಲೇ ಎಲ್ಪಿಜಿ ಸಿಲಿಂಡರ್ ದರ 60 ರೂಪಾಯಿ ಹಾಗೇ ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿಗರ ಏರಿಕೆಯಾಗಿತ್ತು. ಪ್ರಸ್ತುತ ಸಿಲಿಂಡರ್ ಗಳ ಕೊರತೆಯೂ ಕಾಡುತ್ತಿದೆ. ಇರಾನ್ – ಇಸ್ರೇಲ್ ಯುದ್ಧ ಇಂದಿಗೆ 11ನೇ ದಿನಕ್ಕೆ ಕಾಲಿಟ್ಟಿದೆ. ಅದರ ಪರಿಣಾಮ ದೇಶದ ಮೇಲೂ ತಗುಲಿದೆ. ಮೊದಲೇ ನಿರುದ್ಯೋಗದ ಸಮಸ್ಯೆಯಿಂದ ಬಳಲ್ತಾ ಇರೋರಿಗೆ ಈ ದರ ಏರಿಕೆಯ ಬರೆ ಜೋರಾಗಿನೆ ಬೀಳ್ತಾ ಇದೆ. ಅದರಲ್ಲೂ ವಾಹನ ಸವಾರರಿಗೂ ಈ ದರ ಏರಿಕೆಯ ಪೆಟ್ಟು ಬೀಳಲಿದೆ. ಇದರಿಂದ ಸಾಮನ್ಯ ಜನರಿಗೆ ಸಾಕಷ್ಟು ತೊಂದರೆ ಎದುರಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now