ಸುದ್ದಿಒನ್, ಚಿತ್ರದುರ್ಗ. ಮಾ. 11: ಎನ್ಸಿಸಿ ತರಬೇತಿಯು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಕೆಚ್ಚೆದೆಯ ಧೈರ್ಯ, ನಾಯಕತ್ವದ ಗುಣ ಮತ್ತು ನಿಸ್ವಾರ್ಥ ಸೇವೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ಎನ್ಸಿಸಿ ಅಧಿಕಾರಿ ಡಾ. ಎಚ್. ಸತೀಶ್ ನಾಯಕ್ ಅವರು ಹೇಳಿದರು.
ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಲಾ, ವಿe್ಞÁನ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ. ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ ಎನ್ಸಿಸಿ. ಸೀನಿಯರ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವರ್ಷವಿಡೀ ಕಠಿಣ ಪರಿಶ್ರಮದಿಂದ ತರಬೇತಿ ಪೂರೈಸಿದ ಕೆಡೆಟ್ಗಳು ದೇಶದ ಜವಾಬ್ದಾರಿಯುತ ಪ್ರಜೆಗಳಾಗಲೆಂದು ಶುಭ ಹಾರೈಸಿದರು.
ಮುಖ್ಯಅತಿಥಿ ಡಾ. ಎಸ್. ಆನಂದ್ ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ಎನ್ಸಿಸಿ ಒಂದು ಶಿಸ್ತಿನ ಪಾಠಶಾಲೆ. ಇಲ್ಲಿ ಕೇವಲ ಶಾರೀರಿಕ ದೃಢತೆ ಮಾತ್ರವಲ್ಲದೆ, ಮಾನಸಿಕ ಸದೃಢತೆಯೂ ಲಭಿಸುತ್ತದೆ. ಕೆಡೆಟ್ಗಳು ಇಲ್ಲಿ ಕಲಿತ ಸಮಯಪ್ರಜ್ಞೆ ಮತ್ತು ಶಿಸ್ತನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉನ್ನತ ಗುರಿ ತಲುಪಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕರು ಮಾತನಾಡಿ, ಎನ್ಸಿಸಿ ಸಂಘಟನೆಯ ಇತಿಹಾಸ ಮತ್ತು ಅದರ ಮಹತ್ವವನ್ನು ವಿವರಿಸುತ್ತ ಯುವಜನತೆಯಲ್ಲಿ ಏಕತೆ ಮತ್ತು ಶಿಸ್ತನ್ನು ಮೂಡಿಸುವಲ್ಲಿ ಈ ಸಂಘಟನೆಯು ಭಾರತೀಯ ರಕ್ಷಣಾ ವ್ಯವಸ್ಥೆಯ ಎರಡನೇ ಸಾರಥಿಯಾಗಿ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಎಸ್.ಎಚ್. ಪಂಚಾಕ್ಷರಿ ಮಾತನಾಡಿ, ನಮ್ಮ ಕಾಲೇಜಿನ ಹೆಮ್ಮೆಯ ಎನ್.ಸಿ.ಸಿ. ಘಟಕವು ಶಿಸ್ತಿನ ನಡವಳಿಕೆಗೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ತಮಗೆ ಲಭಿಸಿರುವ ಈ ಸದವಕಾಶವನ್ನು ಬಳಸಿಕೊಂಡು ಸಾಧನೆಯ ಶಿಖರಕ್ಕೇರಬೇಕು. ನಿಮ್ಮ ಸಾಧನೆಯ ಮೂಲಕ ಕಾಲೇಜಿನ ಕೀರ್ತಿ ಪತಾಕೆಯನ್ನು ಹಾರಿಸಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ಎನ್ಸಿಸಿ ಕೆಡೆಟ್ಗಳು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಇದ್ದರು.






