Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭ್ರೂಣ ಪತ್ತೆ ಮಾಡುವವರ ವಿರುದ್ಧ ಕಠಿಣ ಕ್ರಮ : ಸಚಿವ ಸುಧಾಕರ್

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ನಲ್ಲಿ 100% ಹಾಗೂ ಎರಡನೇ ಡೋಸ್ ನಲ್ಲಿ 85.3% ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್ ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿ ಇದೆ ಎಂದು ತಿಳಿಸಿದರು.

ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ. ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡುಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.

ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ. ಕೆಲ ವರ್ಷಗಳಿಂದ ಲಿಂಗಾನುಪಾತವೂ ಹೆಚ್ಚಾಗಿದೆ. 2001 ರಲ್ಲಿ 946 ಇದ್ದ ಲಿಂಗಾನುಪಾತ, 2018 ರಲ್ಲಿ 957 ಕ್ಕೇರಿದೆ. ಅಂದರೆ, ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ. ಅವರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರವಾನಗಿಯನ್ನು ರದ್ದು ಮಾಡಲಾಗುವುದು. ಭ್ರೂಣ ಪತ್ತೆಗೆ ಅವಕಾಶ ನೀಡುವುದಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!