Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮೇಲೆ ಸುಮ್ಮನಿರುವುದಿಲ್ಲ ಎಂದು 24 ಗಂಟೆಗಳ ಕಾಲಾವಕಾಶ ನೀಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು ?

---Advertisement---

ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್‌ ಮಂದಣ್ಣ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್‌ ಆಗಿತ್ತು. ಆ ಬಗ್ಗೆ ಮಾಧ್ಯಮಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿತ್ತು. ಆ ಬಗ್ಗೆ ಇದೀಗ ರಶ್ಮಿಕಾ ಗರಂ ಆಗಿದ್ಧಾರೆ. ಏನೇ ಟ್ರೋಲ್‌, ನೆಗೆಟಿವ್‌ ವಿಚಾರಗಳನ್ನು ಹರಡಿದರೂ ಸಹಿಸಿಕೊಂಡಿದ್ದ ರಶ್ಮಿಕಾ, ಇದೀಗ ಮೌನ ಮುರಿದಿದ್ದಾರೆ.

ಈ ಕುರಿತು ಸುದೀರ್ಘ ಪತ್ರವೊಂದನ್ನು ರಶ್ಮಿಕಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಈ ಸುದೀರ್ಘ ಪಯಣದಲ್ಲಿ ನನ್ನ ಜೊತೆಗಿರುವ ಪ್ರಿಯ ಜನರಿಗೆ ಮತ್ತು ಈ ವಿಷಯಕ್ಕೆ ಸಂಬಂಧಪಟ್ಟ ಇತರರಿಗೆ, ಕಳೆದ 8 ವರ್ಷಗಳಿಂದ ಮಾಧ್ಯಮಗಳ ಒಂದು ವರ್ಗ ಮತ್ತು ಕೆಲವು ವ್ಯಕ್ತಿಗಳು ನನ್ನ ವಿರುದ್ಧ ಸುಳ್ಳು ಮಾಹಿತಿ ಹಂಚುತ್ತಿದ್ದಾರೆ.ನನ್ನ ಮಾತುಗಳನ್ನು ಸಂದರ್ಭಕ್ಕೆ ತಕ್ಕಂತೆ ಬಳಸದೆ ತಿರುಚುವುದು, ನಾನು ಆಡದ ಮಾತುಗಳನ್ನು ಸುಳ್ಳು ಕಥೆಗಳನ್ನಾಗಿ ಸೃಷ್ಟಿಸುವುದು ಹಾಗೂ ಕೇವಲ ವ್ಯೂವ್ಸ್ ಮತ್ತು ಎಂಗೇಜ್‌ಮೆಂಟ್‌ಗಾಗಿ ದ್ವೇಷವನ್ನು ಹರಡುವುದನ್ನು ನಾನು ಗಮನಿಸುತ್ತಲೇ ಬಂದಿದ್ದೇನೆ.

ಇದೆಲ್ಲವೂ ನನಗೆ ನೋವುಂಟು ಮಾಡಿದರೂ ಸಹ, ನಾನು ಇಲ್ಲಿಯವರೆಗೆ ತಾಳ್ಮೆಯಿಂದ ಇದ್ದೆ ಮತ್ತು ಮೌನವಾಗಿದ್ದೆ. ಏಕೆಂದರೆ, ಸಾರ್ವಜನಿಕ ಜೀವನದಲ್ಲಿರುವಾಗ ಕೆಲವೊಮ್ಮೆ ಇಂತಹ ಅನ್ಯಾಯದ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಸತ್ಯವನ್ನು ನಾನು ಒಪ್ಪಿಕೊಂಡಿದ್ದೆ. ಆದರೆ, ಕಳೆದ 24 ಗಂಟೆಗಳಲ್ಲಿ ನಡೆದಿರುವ ಘಟನೆಗಳು ನಾನು ಇನ್ನು ಮುಂದೆ ನಿರ್ಲಕ್ಷಿಸಲಾಗದ ಸ್ಥಿತಿಯನ್ನು ದಾಟಿವೆ”

ಸುಮಾರು ಎಂಟು ವರ್ಷಗಳ ಹಿಂದಿನ ಹಳೆಯ ಖಾಸಗಿ ಸಂಭಾಷಣೆಯೊಂದನ್ನು, ಸಂಬಂಧಪಟ್ಟವರ ಅರಿವಿಲ್ಲದೆ ಅಥವಾ ಅನುಮತಿಯಿಲ್ಲದೆ ರೆಕಾರ್ಡ್ ಮಾಡಿ ಈಗ ಹರಿಬಿಡಲಾಗಿದೆ. ಆ ಸಂಭಾಷಣೆಯ ಒಂದು ಸಣ್ಣ ಭಾಗವನ್ನು ಉದ್ದೇಶಪೂರ್ವಕವಾಗಿ ಸಂದರ್ಭಕ್ಕೆ ತಕ್ಕಂತೆ ಬಳಸದೆ, ಮತ್ತೊಂದು ಅನಗತ್ಯ ವಿವಾದ ಸೃಷ್ಟಿಸಲು ಅದನ್ನ ವೈರಲ್‌ ಮಾಡಲಾಗುತ್ತಿದೆ.

ಜನರು ಇಷ್ಟು ಕೆಳಮಟ್ಟಕ್ಕೆ ಇಳಿಯಬಲ್ಲರೇ? ಹೀಗೆ ಮಾಡುವ ಮೂಲಕ, ಈ ವಿಷಯಕ್ಕೆ ಕಿಂಚಿತ್ತೂ ಸಂಬಂಧವಿಲ್ಲದ ನನ್ನ ಕುಟುಂಬದವರು ಮತ್ತು ನನ್ನ ಜೊತೆ ಸೌಹಾರ್ದಯುತ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ಮುಜುಗರಕ್ಕೆ ಈಡುಮಾಡಿದ್ದಾರೆ. ಇದು ಖಾಸಗಿತನದ ಗಂಭೀರ ಉಲ್ಲಂಘನೆ ಮಾತ್ರವಲ್ಲದೆ, ದಾರಿ ತಪ್ಪಿಸುವ ಮತ್ತು ಮಾನಹಾನಿಕರ ವಿಷಯವನ್ನು ಹರಡುವ ಕೆಲಸವಾಗಿದೆ”

ನಾವು ಜೀವನದಲ್ಲಿ ಮುಂದೆ ಸಾಗುತ್ತಾ, ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಾ ಸಕಾರಾತ್ಮಕತೆಯನ್ನು ಹರಡುತ್ತಿರುವಾಗ, ಕೆಲವು ವ್ಯಕ್ತಿಗಳು ಇನ್ನೊಬ್ಬರ ಘನತೆ ಮತ್ತು ನೆಮ್ಮದಿಗೆ ಭಂಗ ತಂದು, ದ್ವೇಷ ಮತ್ತು ವಿವಾದಗಳನ್ನು ಸೃಷ್ಟಿಸುತ್ತಿರುವುದು ದುರದೃಷ್ಟಕರ. ಎಂಟು ವರ್ಷಗಳಿಂದ ದಾಳಿಗಳು ಕೇವಲ ನನ್ನ ಮೇಲೆ ಸೀಮಿತವಾಗಿದ್ದಾಗ ನಾನು ಮೌನವಾಗಿದ್ದೆ. ಆದರೆ ಇಂದು ಇತರರನ್ನು ಇದರಲ್ಲಿ ಎಳೆದು ತರುತ್ತಿರುವುದರಿಂದ, ನಾನು ಇನ್ನು ಮುಂದೆ ಸುಮ್ಮನಿರಲು ಸಾಧ್ಯವಿಲ್ಲ.

ಯಾವೆಲ್ಲಾ ಮಾಧ್ಯಮ ಸಂಸ್ಥೆಗಳು, ಇನ್‌ಫ್ಲುಯೆನ್ಸರ್‌ಗಳು ಮತ್ತು ವ್ಯಕ್ತಿಗಳು ಈ ವಿಷಯವನ್ನು ಅಥವಾ ಇದಕ್ಕೆ ಸಂಬಂಧಿಸಿದ ಕಥೆಗಳನ್ನು ಹರಡುತ್ತಿದ್ದೀರೋ, ಅವರು ತಕ್ಷಣವೇ ಅದನ್ನು ತೆಗೆದುಹಾಕಬೇಕೆಂದು ವಿನಂತಿಸುತ್ತೇನೆ. ಈ ಹೇಳಿಕೆ ನೀಡಿದ ಸಮಯದಿಂದ ನಿಮಗೆ 24 ಗಂಟೆಗಳ ಕಾಲಾವಕಾಶ ನೀಡಲಾಗುತ್ತಿದೆ. ಇದನ್ನು ಪಾಲಿಸದಿದ್ದಲ್ಲಿ, ನಾಳೆಯಿಂದ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಅನ್ವಯವಾಗುವ ಕಾನೂನಿನ ಪ್ರಕಾರ, ಮಾನಹಾನಿಕರ ಅಥವಾ ಖಾಸಗಿತನವನ್ನು ಉಲ್ಲಂಘಿಸುವ ವಿಷಯಗಳನ್ನು ಹರಡುತ್ತಿರುವ ವ್ಯಕ್ತಿಗಳು, ಇನ್‌ಫ್ಲುಯೆನ್ಸರ್‌ಗಳು, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಅಥವಾ ಮಾಧ್ಯಮ ಸಂಸ್ಥೆಗಳಿಗೆ ಕಾನೂನು ನೋಟಿಸ್ ನೀಡುವುದೂ ಸೇರಿದಂತೆ ಕಠಿಣ ಕ್ರಮ ಜರುಗಿಸಲಾಗುವುದು. ಎಂದಿದ್ದಾರೆ ರಶ್ಮಿಕಾ ಮಂದಣ್ಣ.

https://x.com/iamRashmika/status/2032044239958524412?ref_src=twsrc%5Etfw%7Ctwcamp%5Etweetembed%7Ctwterm%5E2032044239958524412%7Ctwgr%5Efd53a044266353d297a6eb35ea30f856273f473f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now