Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಸ್ತುವಾರಿ ಹಂಚಿಕೆ ಬೆನ್ನಲ್ಲೇ ಸಚಿವರ ಮಧ್ಯೆ ಅಸಮಾಧಾನದ ಹೊಗೆ..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಕ ಮಾಡಿದ್ದಾರೆ. ಆದ್ರೆ ಇದು ಕೆಲವರಿಗೆ ಅಸಮಾಧಾನಕ್ಕೆ ಕಾರಣವಾಗಿದೆ.ಬಯಸಿದ ಜಿಲ್ಲೆಯ ಉಸ್ತುವಾರಿ ಸಿಗದೆ ಒಳಗೊಳಗೆ ಗೋಳಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವರು ಹಾಗೆಲ್ಲ ಏನು ಇಲ್ಲ ಅಂದ್ರು ಕೂಡ ಮೇಲ್ನೋಟಕ್ಕೆ ಬೆಳವಣಿಗೆಯಲ್ಲೇ ಎಲ್ಲಾ ಕಾಣ್ತಾ ಇದೆ.

ನಮ್ಮ ಹೈಕಮಾಂಡ್ ಸಿಎಂ ಯಾವ ನಿರ್ಧಾರ ತೆಗೆದುಕೊಂಡ್ರು ಬದ್ಧರಾಗಿರ್ತೀವಿ. ನಾನು ಏನ್ ಹೇಳ್ಬೇಕು ಅಂದ್ರು ಅದು ನಮ್ಮ ಪಕ್ಷದ ಆಂತರಿಕ ವಿಚಾರ. ನಮ್ಮ ಸಮಸ್ಯೆ ನಮ್ಮ ಸಲಹೆಗಳನ್ನ ಸಿಎಂ ಬಳಿ ಹಂಚಿಕೊಳ್ತೇವೆ. ಬಹಿರಂಗವಾಗಿ ಏನನ್ನು ಹೇಳೋಕೆ ಆಗಲ್ಲ ಅಂತ ಸುಧಾಕರ್ ಹೇಳಿದ್ದಾರೆ.

ಎಂಟಿಬಿ ನಾಗರಾಜ್ ಕೂಡ ಸಿಎಂ ಭೇಟಿಯಾಗಿ ಮಾತಾಡಿದ್ದಾರೆ. ಈ ಮುಂಚೆ ಚಿಕ್ಕಬಳ್ಳಾಪುರ ಕ್ಷೇತ್ರ ವಹಿಸಿಕೊಂಡಿದ್ದ ಸುಧಾಕರ್ ಆಂತರಿಕವಾಗಿ ಮಾತಾಡ್ತೀವಿ ಅಂದಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡಿದ್ರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿ ಆಗ್ತೀವಿ ಎಂಬುದರಿಂದ ಎಲ್ಲರು ನೇರವಾಗಿ ಅಸಮಾಧಾನ ಹೊರ ಹಾಕುತ್ತಿಲ್ಲ ಎನ್ನಲಾಗಿದೆ.

ಈಗಾಗಲೇ ಎಂಟಿಬಿ ನಾಗಾರಾಜ್ ಮತ್ತು ಸುಧಾಕರ್ ಭೇಟಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರವನ್ನ ಎಂಟಿಬಿ ನಾಗರಾಜ್ ಬಯಸಿದ್ರು. ಈಗ ಅದು ಸುಧಾಕರ್ ಪಾಲಾಗಿದೆ. ಚಿಕ್ಕಬಳ್ಳಾಪುರ ಬಯಸಿದ್ದು ಸುಧಾಕರ್ ಆದ್ರೆ ಅವರಿಗೆ ಬೆಂಗಳೂರು ಗ್ರಾಮಾಂತರ ನೀಡಲಾಗಿದೆ. ಸ್ವಂತ ಜಿಲ್ಲೆ ಸಿಗದೆ ಇರೋದಕ್ಕೆ ಅಸಮಾಧಾನ ಹೊಗೆಯಾಡುತ್ತಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!