Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಹನಿ ಟ್ರ್ಯಾಪ್ ಕೇಸ್ ಗೆ ಬಿಗ್ ಟ್ವಿಸ್ಟ್: ಸುದ್ದಿಗೋಷ್ಠಿ ಯಲ್ಲಿ ರಹಸ್ಯ ಬಯಲು 

---Advertisement---

ದಾವಣಗೆರೆ : ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದ್ದ ದಾವಣಗೆರೆ  ಹನಿ ಟ್ರ್ಯಾಪ್ (Honey Trap ) ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕೆದೆ. ಆರಂಭದಲ್ಲಿ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಡಿ ಬಂಧಿತರಾಗಿದ್ದ ನರ್ಸ್ ಸೇರಿದಂತೆ ನಾಲ್ವರು, ಇದೀಗ ತಮ್ಮನ್ನು ಪ್ರಭಾವಿ ವ್ಯಕ್ತಿಗಳು ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದಾವಣಗೆರೆಯ ಪ್ರತಿಷ್ಠಿತ ಉದ್ಯಮಿಯೊಬ್ಬರನ್ನು ಬಲೆಗೆ ಬೀಳಿಸಿ ಅವರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಹನಿಟ್ರ್ಯಾಪ್‌ ಜಾಲವನ್ನು ದಾವಣಗೆರೆ ಪೊಲೀಸರು ಪತ್ತೆಹಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರು ಮಹಿಳಾ ನರ್ಸ್‌ ಹಾಗೂ ಚನ್ನಬಸಪ್ಪ ಸೇರಿದಂತೆ ಮೂವರು ಪುರುಷರನ್ನು ಬಂಧಿಸಲಾಗಿತ್ತು.
ದಾಖಲಾಗಿದ್ದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬಲೆ ಬೀಸಿ ನರ್ಸ್ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಆರೋಪಿಗಳು ಇದರಲ್ಲಿ ಪ್ರಭಾವಿ ವ್ಯಕ್ತಿಯ ಕೈವಾಡ ಇದೆ ಎಂದು ಹೇಳಿದ್ದಾರೆ.

ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹನಿಟ್ರ್ಯಾಪ್ ಮಾಡಿಲ್ಲ. ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿತ್ತು ಎಂದಿದ್ದಾರೆ.
ನಮ್ಮ ಮೇಲಿನ ಹಳೆಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಅಧಿಕಾರಿಯೊಬ್ಬರು ಈ ಕೃತ್ಯಕ್ಕೆ ಸಾಥ್ ನೀಡಿದ್ದಾರೆ. ಹನಿಟ್ರ್ಯಾಪ್ ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದುಇದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...