Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ಉಸ್ತುವಾರಿ ಸಿಎಂ ಬಳಿ ಇರುವುದೇ ಸೂಕ್ತ : ವಿ ಸೋಮಣ್ಣ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಎಲ್ಲಾ ಜಿಲ್ಲೆಗಳಿಗೂ ಸಿಎಂ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇದು ಕೆಲವರಿಗೆ ಅಸಮಾಧಾನವನ್ನು ತರಿಸಿದೆ. ಆದ್ರೆ ಯಾರೂ ನೇರವಾಗಿ ಅಸಮಾಧಾನ ಹೊರ ಹಾಕುತ್ತಿಲ್ಲ.

ಇದೀಗ ಉಸ್ತುವಾರಿ ಬಗ್ಗೆ ವಸತಿ ಸಚಿವ ವಿ ಸೋಮಣ್ಣ ಮಾತನಾಡಿದ್ದು, ವರಿಷ್ಠರ ಸೂಚನೆಯ ಮೇರೆಗೆ ಉಸ್ತುವಾರಿ ಸಚಿವರನ್ನ ನೇಮಕ ಮಾಡಲಾಗಿದೆ. ಈ ರೀತಯ ಪ್ರಯೋಗಗಳು ಬೇರೆ ಬೇರೆ ಜಿಲ್ಲೆಯಲ್ಲೂ ನಡೆಯುತ್ತಿರುತ್ತವೆ. ಅದರಂತೆ ನಮ್ಮಲ್ಲಿಯೂ ಆ ಪ್ರಯೋಗವನ್ನ ಮಾಡಿದ್ದಾರೆ ಅಷ್ಟೇ. ನಾನು ಈ ನಿರ್ಧಾರವನ್ನ ಗೌರವಿಸುತ್ತೇನೆ ಎಂದಿದ್ದಾರೆ.

ಬೆಂಗಳೂರು ಉಸ್ತುವಾರಿಯನ್ನ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಇಟ್ಟುಕೊಂಡಿದ್ದಾರೆ. ಅದು ಅವರ ಬಳಿ ಇಟ್ಟುಕೊಳ್ಳುವುದೇ ಸೂಕ್ತ. ಈ ಬಗ್ಗೆ ವರಿಷ್ಠರು ಮತ್ತು ಹೈಕಮಾಂಡ್ ನವರು ತೀರ್ಮಾನ ಮಾಡಿಯೇ ಉಸ್ತುವಾರಿ ಹಂಚಿಕೆ ಮಾಡಿದ್ದಾರೆ. ನಾನು ಕೂಡ ಬೆಂಗಳೂರು ಉಸ್ತುವಾರಿಯನ್ನ ಕೇಳಿದ್ದೆ. ಅದನ್ನ ಬೇರೆ ಯಾರಿಗೂ ನೀಡಿಲ್ಲ. ಯಾವ ಲೆಕ್ಕಾಚಾರದಲ್ಲಿ ಬೇರೆ ಬೇರೆ ಜಿಲ್ಲೆಗೆ ಹಂಚಿಕೆ ಮಾಡಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!