Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರಸ್ವತಿ ಕಾನೂನು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 17 : ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾದಾಗ ಮಾತ್ರ ಜೀವನದಲ್ಲಿ ಎದುರಾಗುವ ಸಮಸ್ಯೆ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ಬಿ.ಸಿ.ಎಂ.ಇಲಾಖೆ ಅಧಿಕಾರಿ ಪುಷ್ಪಲತ ಭವಿಮಠ ಕರೆ ನೀಡಿದರು.

 

ಸರಸ್ವತಿ ಕಾನೂನು ಕಾಲೇಜು, ಮಹಿಳಾ ಸಬಲೀಕರಣ ಕೋಶ, ಐಕ್ಯುಎಸಿ. ವತಿಯಿಂದ ಕಾಲೇಜಿನ ಡೈಮಂಡ್ ಜ್ಯುಬಿಲಿ ಆಡಿಟೋರಿಯಂನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕುಟುಂಬ ನಿರ್ವಹಣೆ ಜೊತೆ ಮಹಿಳೆ ಹೊರಗಡೆಯೂ ದುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 21 ನೇ ಶತಮಾನದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿಯೂ ಪುರುಷರಿಗೆ ಸರಿಸಮಾನಳಾಗಿದ್ದಾಳೆ. ಮಹಿಳೆ ಅಡುಗೆ ಮನೆಗೆ ಮಾತ್ರ ಸೀಮಿತ ಎನ್ನುವ ಕೀಳರಿಮೆ ಬೇಡ. ಆರ್ಥಿಕ ಸಂಕಷ್ಟಗಳನ್ನು ಎದುರಿಸಿ ಯಶಸ್ಸು ಸಾಧಿಸಿರುವ ಅನೇಕ ವಿದ್ಯಾರ್ಥಿಗಳು ಕಣ್ಣ ಮುಂದಿದ್ದಾರೆಂದು ಹೇಳಿದರು.

 

ಸರಸ್ವತಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಡಾ.ಎಂ.ಎಸ್.ಸುಧಾದೇವಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಸದೃಡ ಸಮಾಜ ನಿರ್ಮಾಣವಾಗಬೇಕಾದರೆ ಮಹಿಳೆಯರ ಪಾತ್ರವು ಮುಖ್ಯ. ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗಗಳಲ್ಲಿಯೂ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ಪುರುಷ-ಮಹಿಳೆ ಎನ್ನುವ ವ್ಯತ್ಯಾಸ ಸರಿಯಲ್ಲ. ಇಬ್ಬರು ಸಮಾನರು ಎಂದರು.
ಐಕ್ಯುಎಸಿ. ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಎನ್.ಡಿ.ಗೌಡ, ಸಹಾಯಕ ಪ್ರಾಧ್ಯಾಪಕಿ ಹರ್ಷ ಎಸ್.ಎಂ. ಇವರುಗಳು ವೇದಿಕೆಯಲ್ಲಿದ್ದರು.

 

ಕಾನೂನು ವಿದ್ಯಾರ್ಥಿನಿ ಮಾನಸ ಮತ್ತು ತಂಡದವರು ಪ್ರಾರ್ಥಿಸಿದರು. ಮೇಘನಾ ಬಿ.ಸಿ. ಸ್ವಾಗತಿಸಿದರು. ಮಾನಸ ಬಿ.ಎಂ.ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಅಭಿನೇತ್ರಿ ಪಟವರ್ಧನ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪಿ.ಸಿ.ಮುರುಗೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now