ವಿಜಯಪುರ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗಂತೂ ಕಾಂಗ್ರೆಸ್ ಟಿಕೆಟ್ ಹಂಚಿಕೆಯೇ ದೊಡ್ಡ ಸವಾಲಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಅಂದ್ರೆ ಮಲ್ಲಿಕಾರ್ಜುನ ಅವರ ಮಗನಿಗೆ ಟಿಕೆಟ್ ನೀಡಬೇಕೆಂದು ಕುಟುಂಬಸ್ಥರ ಒತ್ತಾಯ. ಅತ್ತ ಶಾಮನೂರು ಶಿವಶಂಕರಪ್ಪ ಅವರು ಇದ್ದಿದ್ದರು ಅಲ್ಪಸಂಖ್ಯಾತರಿಗೇನೆ ನೀಡುತ್ತೇನೆ ಮುಂದಿನ ಚುನಾವಣೆಯ ಟಿಕೆಟ್ ಅಂತ ಹೇಳಿದ್ರು ಎಂದು ಅಲ್ಲಸಂಖ್ಯಾತರು ದುಂಬಾಲು ಬಿದ್ದಿದ್ದಾರೆ. ಹೀಗಾಗಿ ಹೈಕಮಾಂಡ್ ತೀರ್ಮಾನ ಏನಾಗಬಹುದು ಎಂಬುದು ಎಲ್ಲರ ಕುತೂಹಲವಿರುವಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸದೊಂದು ಬಾಂಬ್ ಹಾಕಿದ್ದಾರೆ.
ವಿಜಯಪುರದಲ್ಲಿ ಮಾತನ್ನಾಡಿದ ಅವರು, ಯಡಿಯೂರಪ್ಪ ಅವರ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನ ಬಲಿ ಕೊಡ್ತಾ ಇದೆ. ಯಡಿಯೂರಪ್ಪ ಅವರ ಕುಟುಂಬ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಈ ಹಿಂದೆ ಶಿವಮೊಗ್ಗದಲ್ಲಿ ರಾಘವೆಂದ್ರಗೆ ಮತ ಹಾಕುವಂತೆ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಯಡಿಯೂರಪ್ಪ ಅವರು ಶಾಮನೂರು ಶಿವಶಂಕರಪ್ಪಗೆ ಮತ ಹಾಕುವಂತೆ ಹೇಳಿದ್ದರು.

ಒಂದೊಮ್ಮೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದರೆ, ಇತ್ತ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದರು, ಆಮೇಲೆ ಅದನ್ನು ವಾಪಾಸ್ ಪಡೆದು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೆ ನೀಡುತ್ತಾರೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ಬಿಜೆಪಿ ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ಎರೆಉ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿದೆ. ಈಗೇನಿದ್ದರೂ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಬಹುದು ಎಂಬ ಕುತೂಹಲವಂತು ಇದ್ದೇ ಇದೆ. ಈಗ ಯತ್ನಾಳ್ ಅವರು ಸಿಡಿಸಿರುವ ಬಾಂಬ್ ನಿಜವಾಗುತ್ತಾ ಹೇಗೆ ಅನ್ನೋದನ್ನ ನೋಡಬೇಕಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











