Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾತನಂತೆ ಮೊಮ್ಮಗನು ಗೆದ್ದು ಬರ್ತಾರೆ : ಡಿಕೆ ಶಿವಕುಮಾರ್

---Advertisement---

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಇರುವ ಕಾರಣ ಕಾಂಗ್ರೆಸ್ ನಾಯಕರೆಲ್ಲಾ ದಾವಣಗೆರೆಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಮರ್ಥ್ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು, ತಾತನಂತೆ ಮೊಮ್ಮಗ ಕೂಡ ಗೆದ್ದು ಬಾರ್ತಾರೆ ಎಂಬ ಮಾತನ್ನ ಹೇಳಿದ್ದಾರೆ.

ಮುಖ್ಯಮಂತ್ರಿಗಳು, ನಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ನಾವೆಲ್ಲಾ ಸೇರಿ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಒಮ್ಮತದಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇವತ್ತು ನಮ್ಮ ಯುವ ನಾಯಕ ವಿದೇಶದಲ್ಲಿ ಕಲಿತು, ಗ್ರಾಮೀಣ ಜನರ ಮತ್ತು ನಗರ ಜನರ ಸೇವೆಯನ್ನು ಮಾಡಬೇಕು ಅಂತ ಹೇಳಿ, ತನ್ನದೇ ಆದ ಆಸೆ ಆಕಾಂಕ್ಷೆಗಳನ್ನ ಇಟ್ಟುಕೊಂಡು, ಸಮಾಜ ಸೇವೆ ಮಾಡಲು ಬಂದಿದ್ದಾರೆ. ಅವರ ವಿದ್ಯಾಭ್ಯಾಸಕ್ಕಾಗಿ ಮತ್ತೆ ವಿದೇಶಕ್ಕೆ ಕಳುಹಿಸಬೇಕು ಎಂದು ಬಂದಾಗ ನಮ್ಮ ಶಿವಶಂಕರಪ್ಪ ಅವರು ಇಲ್ಲ, ನೀನು ಇಲ್ಲಿಯೇ ಕಲಿತು, ಇಲ್ಲಿಯೇ ವ್ಯವಹಾರ ಮಾಡು ಅಂತ ಮಾರ್ಗದರ್ಶನ ನೀಡಿದ್ದಾರೆ.

ಇಂದು ಈ ಕ್ಷೇತ್ರದ ಜನತೆ, ನಮ್ಮ ಕಾರ್ಯಕರ್ತರು, ಮುಖಂಡರು ಅವರ ಹೆಸರನ್ನು ಸೂಚಿಸಿದ್ದರು‌‌. ಹೀಗಾಗಿ ನಾನು, ನಮ್ಮ ಮುಖ್ಯಮಂತ್ರಿಗಳು, ಪಕ್ಷದ ವರಿಷ್ಠರೆಲ್ಲ ಚರ್ಚೆ ಮಾಡಿ, ಎಲ್ಲಾ ಶಾಸಕರ ಜೊತೆಗೂ ಚರ್ಚೆ ಮಾಡಿ, ಈ ನಿರ್ಧಾರಕ್ಕೆ ಬಂದಿದ್ದೇವೆ. ಮುಸ್ಲಿಂ ಬಾಂಧವರು ಕೂಡ ಮನವಿ ಮಾಡಿದ್ದರು. ಆದರೆ ನಾವೂ ಲೆಕ್ಕಚಾರ ಮಾಡಿ ನೋಡಿದೆವು. ನಮ್ಮ ಕಾಂಗ್ರೆಸ್ ಪಕ್ಷದ್ದು ಮೊದಲಿನಿಂದಲೂ ಒಂದು ಲೆಕ್ಕಚಾರವಿದೆ. ಅವರ ಕುಟುಂಬಕ್ಕೆ ನೀಡುವ ಕೆಲಸ ಮಾಡಿಕೊಂಡು ಬಂದಿದ್ದೇವೆ. ಇಂದು ಕೂಡ ಅದನ್ನು ಮುಂದುವರೆಸಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...