Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ MP ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸ್ಪರ್ಧೆಯ ಕಷ್ಟಗಳನ್ನು ಬಿಚ್ಚಿಟ್ಟ ವಿನಯ್ ಕುಮಾರ್! 

---Advertisement---

ದಾವಣಗೆರೆ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜಕಾರಣಿ ಜಿಬಿ ವಿನಯ್ ಕುಮಾರ್ ಅವರು, ತಮಗೆ ಎದುರಾದ ಒತ್ತಡ ಮತ್ತು ಸಂಕಷ್ಟಗಳ ಕುರಿತು ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕಣಕ್ಕಿಳಿದಿರುವ ಅಭ್ಯರ್ಥಿಗಳು, ವಿಶೇಷವಾಗಿ ಮುಸ್ಲಿಂ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯದಂತೆ ಮನವಿ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿದ ವೇಳೆ ತಮಗೆ ಉನ್ನತ ಮಟ್ಟದ ಒತ್ತಡಗಳು ಎದುರಾದವು ಎಂದು ಹೇಳಿದ ಅವರು, “ಒಂದು ಮತ ಬಂದರೂ, ಲಕ್ಷ ಮತ ಬಂದರೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬ ದೃಢ ನಿಲುವು ತೆಗೆದುಕೊಂಡಿದ್ದೆ. ಫಲಿತಾಂಶ ಏನೇ ಇರಲಿ, ಹೋರಾಡಿದ್ದೇನೆ ಎಂಬ ಆತ್ಮತೃಪ್ತಿ ಇದೆ” ಎಂದರು.ಸ್ವತಂತ್ರ ಅಭ್ಯರ್ಥಿಗಳಿಗೆ ಸಂದೇಶ ನೀಡಿದ ಅವರು, ಕಡಿಮೆ ಮತಗಳ ಭಯದಿಂದ ಹಿಂದೆ ಸರಿಯಬಾರದು ಎಂದು ಕರೆ ನೀಡಿದರು. “ಮತಗಳ ಸಂಖ್ಯೆಯಿಂದ ನಿಮ್ಮ ವ್ಯಕ್ತಿತ್ವ ನಿರ್ಧಾರವಾಗುವುದಿಲ್ಲ. ಸಮಾಜದಲ್ಲಿ ಕೆಟ್ಟ ಹೆಸರು ಬರುತ್ತದೆ ಎಂಬ ಭಯ ಬೇಡ” ಎಂದು ಹೇಳಿದರು.

ಇನ್ನೂ ರಾಜಕೀಯ ಒತ್ತಡಗಳು ಹಾಗೂ ಆಮಿಷಗಳ ಬಗ್ಗೆ ಎಚ್ಚರಿಕೆ ನೀಡಿದ ಅವರು, “ದೊಡ್ಡವರ ಮಾತುಗಳಿಗೆ ಮಾರು ಹೋಗಬೇಡಿ. ಚುನಾವಣೆ ವೇಳೆಯಲ್ಲಿ ಭರವಸೆ ನೀಡುವವರು ನಂತರ ನಿಮ್ಮನ್ನು ಗುರುತಿಸುವುದೇ ಇಲ್ಲ” ಎಂದು ಟೀಕಿಸಿದರು.ನಾಮಪತ್ರ ಹಿಂಪಡೆಯುವುದರಿಂದ ಸಾರ್ವಜನಿಕರಲ್ಲಿ ತಪ್ಪು ಸಂದೇಶ ಹೋಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಅವರು, “ಜನರು ‘ಡೀಲ್ ಆಗಿದ್ದಾರೆ’ ಎಂಬ ಆರೋಪ ಮಾಡಬಹುದು” ಎಂದರು.

ಕೊನೆಗೆ, ಮುಸ್ಲಿಂ ಅಭ್ಯರ್ಥಿಗಳಿಗೆ ವಿಶೇಷ ಮನವಿ ಮಾಡಿದ ಅವರು, “ಎಷ್ಟು ಕಷ್ಟ ಬಂದರೂ ಹಿಂದೆ ಸರಿಯಬೇಡಿ. ಮೊದಲ ಪ್ರಯತ್ನದಲ್ಲಿ ಗೆಲುವು ಸಿಗದಿದ್ದರೂ ಮುಂದಿನ ದಿನಗಳಲ್ಲಿ ಜಯ ನಿಮ್ಮದೇ ಆಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...