ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮಾ. 26 : ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯಲಿರುವ ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್ಬಾಲ್ ಪಂದ್ಯಾವಳಿಗೆ ಚಿತ್ರದುರ್ಗದಿಂದ ನಾಲ್ಕು ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಕೆ.ಹೆಚ್.ಶಿವರಾಂ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಮಾ.30ರಿಂದ ಏ3ರವರೆಗೆ ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಇದರಲ್ಲಿ ಚಿತ್ರದುರ್ಗ ಜಿಲ್ಲೆಯ ಮಹಿಳಾ ಕ್ರೀಡಾಪಟುಗಳಾದ ಸಾನಿಯಾ, ಎಸ್.ಪೂಜಾ, ಪಿ.ಬಿಂದುಶ್ರೀ ಹಾಗೂ ಎನ್.ಟಿ.ಉಷಾ ರವರು ಆಯ್ಕೆಯಾಗಿದ್ದು, ಮಾ.15 ರಿಂದ 26ರವರೆಗೆ ಹಾಸನ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದು, ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಾ.27 ರಂದು ಪ್ರಯಾಣ ಬೆಳಸಲಿದ್ದಾರೆ ಎಂದಿದ್ದಾರೆ.
ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಹೆಚ್ಚಿನ ಸಾಧನೆಯನ್ನು ಮಾಡಿ ಜಿಲ್ಲೆಗೆ ರಾಜ್ಯಕ್ಕೆ ಕೀರ್ತಿಯನ್ನು ತರುವಂತೆ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಸಂಸ್ಥೆಯ ಎಂ.ಹೆಚ್.ಜಯ್ಯಣ್ಣ, ಲೋಹಿತಾಕ್ಷಿ, ಹಿರಿಯ ಕ್ರೀಡಾಪಟುಗಳಾದ ಸೂರಜ್ ಕಾರ್ಯದರ್ಶಿ ಎನ್.ಡಿ.ಗೌಡ ಸಿ.ಎ.ಪ್ರಮೇನಾಥ್ ಶುಭ ಕೋರಿದ್ದಾರೆ.
















