Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರಿದ ಕಾರ್ಯಕರ್ತರು

---Advertisement---

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾವು ಜೋರಾಗಿರುವಾಗಲೇ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಮೊದಲೇ ಕಾಂಗ್ರೆಸ್ ಮತ್ತು ಬಿಜೆಪಿಗೆ ನೇರಾ ನೇರಾ ಸ್ಪರ್ಧೆ ಇದೆ. ಶಾಮನೂರು ಕುಟುಂಬದ ಕ್ಷೇತ್ರವಾಗಿರುವ ದಾವಣಗೆರೆಯನ್ನು ಹೇಗಾದರೂ ಮಾಡಿ ಪಡೆಯಬೇಕೆಂಬ ಹಠ ಬಿಜೆಪಿಗರದ್ದಾಗಿದೆ. ಇದರ ನಡುವೆ ಮುಸ್ಲಿಮರು ಕೂಡ ಕಾಂಗ್ರೆಸ್ ಮೇಲೆ ಮುನಿಸನ್ನ ತೋರಿದ್ದಾರೆ. ಇದೆಲ್ಲದರ ನಡುವೆ ಬಿಗ್ ಅಪ್ಡೇಟ್ ಒಂದು ದಾವಣಗೆರೆಯಲ್ಲಿ ನಡೆದಿದೆ.

ಇಂದು ಹತ್ತಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ. ಇದರಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸರಿಕರಿಯಪ್ಪ ಅವರಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ. ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಮಾಡಿ, ವಿಶೇಷ ಪೂಜೆಯನ್ನು ಸಲ್ಲಿಸಿ ಕಾಂಗ್ರೆಸ್ ತೊರೆದಿದ್ದಾರೆ. ಬಳಿಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸರಿಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದು ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.

ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಮಾಡುವಾಗಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರ ಫೋಟೋವನ್ನು ಹಿಡಿದಿದ್ದರು. ಸದ್ಯ ಈ ಬೆಳವಣಿಗೆಯಿಂದ ಕಾಂಗ್ರೆಸ್ ಕಾರ್ಯಜರ್ತರು ಯೋಚಿಸುವಂತಾಗಿದೆ. ಶಾಮನೂರು ಶಿವಶಂಕರಪ್ಪ ಅವರಿಂದ ತೆರವಾದ ದಕ್ಷಿಣ ಕ್ಷೇತ್ರಕ್ಕೆ ಅವರ ಮೊಮ್ಮಗ ಸಮರ್ಥ್ ಗೆ ಟಿಕೆಟ್ ಪಡೆದುಕೊಳ್ಳುವಲ್ಲಿ ಕುಟುಂಬದವರು ಕೂಡ ಸಕ್ಸಸ್ ಆಗಿದ್ದಾರೆ. ಇತ್ತ ಮುಸ್ಲಿಮರ ಮುನಿಸಿನ ಜೊತೆಗೆ ಯುವಕರು ಕಾಂಗ್ರೆಸ್ ಬಿಡುತ್ತಿರುವ ಬೆಳವಣಿಗೆಯೂ ನಡೆದಿದೆ. ಈ ಎಲ್ಲಾ ಸವಾಲಿನ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲ್ಲಿಸಿಕೊಂಡು ಬರಬೇಕಾದ ಅನಿವಾರ್ಯತೆ ಇದೆ. ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ 4ಕ್ಕೇನೆ ಫಲಿತಾಂಶವೂ ಹೊರ ಬೀಳಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...