
ಸುದ್ದಿಒನ್, ಚಿತ್ರದುರ್ಗ. ಮಾ.29 : ನಗರದ ಸಹ್ಯಾದ್ರಿ ಬಡಾವಣೆಯ ನಿವಾಸಿ ವಿಜಯಕುಮಾರ್ (70 ವರ್ಷ) ಆನಾರೋಗ್ಯದಿಂದ ಭಾನುವಾರ ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮ್ರತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಇಂದು (ಮಾರ್ಚ್. 29, ಭಾನುವಾರ) ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಡೆಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.



















