ಬಹುಭಾಷಾ ಖ್ಯಾತ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದ್ದು, ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಅನಾರೋಗ್ಯದಿಂದ ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯ ಅಗಲಿಕೆಯಿಂದ ಕುಟುಂಬದವರಲ್ಲದೆ ಚಿತ್ರರಂಗದಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ.ಸ್ವರ್ಣಲತಾ ಮೂಲತಃ ಗದಗ ಜಿಲ್ಲೆಯವರಾಗಿದ್ದು, ಬಾಲ್ಯದಲ್ಲೇ ಅನಾಥಳಾಗಿ ಬೆಳಗಾವಿಯ ಅನಾಥಾಶ್ರಮದಲ್ಲಿ ಬೆಳೆದಿದ್ದರು.
ಅಜ್ಜಿ ನಿಧನವಾದಾಗ ಕೇವಲ 12 ವರ್ಷದವಳಾಗಿದ್ದ ಅವರು ಜೀವನದಲ್ಲಿ ಅನೇಕ ಸಂಕಷ್ಟಗಳನ್ನು ಎದುರಿಸಿ, ಬಳಿಕ ನರ್ಸಿಂಗ್ ತರಬೇತಿ ಪಡೆದು ಬೆಂಗಳೂರಿನಲ್ಲಿ ಉದ್ಯೋಗ ಆರಂಭಿಸಿದ್ದರು. ಅಲ್ಲಿಯೇ ಮಂಗಳೂರಿನವರಾದ ಮಂಜುನಾಥ್ ಅವರೊಂದಿಗೆ ವಿವಾಹವಾಗಿದ್ದರು.ಕುಟುಂಬದ ಆರ್ಥಿಕ ಹೊಣೆಗಾರಿಕೆಯನ್ನು ಬಹುತೇಕ ತಮ್ಮ ಮೇಲೆ ಹೊತ್ತುಕೊಂಡ ಸ್ವರ್ಣಲತಾ, ಮಕ್ಕಳನ್ನು ಶಿಕ್ಷಣದಲ್ಲಿ ಮುಂದೆಳೆಯುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ತಮ್ಮ ತಂಗಿಯ ಮದುವೆಯನ್ನೂ ಅವರು ನಡೆಸಿಕೊಟ್ಟಿದ್ದರು ಎಂಬುದನ್ನು ಪ್ರಕಾಶ್ ರಾಜ್ ಹಲವಾರು ಬಾರಿ ಸ್ಮರಿಸಿದ್ದಾರೆ. ತಾಯಿಯನ್ನು ದೇವತೆಯಂತೆ ಕಾಣುತ್ತಿದ್ದ ಅವರು, “ನನ್ನ ತಾಯಿ ನಮ್ಮ ಕುಟುಂಬದ ಶಕ್ತಿ, ಅವಳ ತ್ಯಾಗವನ್ನು ಮರೆಯಲು ಸಾಧ್ಯವಿಲ್ಲ” ಎಂದು ಭಾವುಕರಾಗಿ ಹೇಳಿಕೊಂಡಿದ್ದರು.
ಧಾರ್ಮಿಕ ನಂಬಿಕೆಗಳ ವಿಷಯದಲ್ಲೂ ಸ್ವರ್ಣಲತಾ ತಮ್ಮದೇ ಆದ ಭಾವನೆ ಹೊಂದಿದ್ದರೆ, ಕುಟುಂಬದಲ್ಲಿ ವಿಭಿನ್ನ ಅಭಿಪ್ರಾಯಗಳನ್ನು ಗೌರವಿಸುವ ವಾತಾವರಣವಿತ್ತು ಎಂದು ಪ್ರಕಾಶ್ ರಾಜ್ ಹೇಳಿಕೊಂಡಿದ್ದರು.1965ರ ಮಾರ್ಚ್ 26ರಂದು ಜನಿಸಿದ ಪ್ರಕಾಶ್ ರಾಜ್, ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ವಿಶಿಷ್ಟ ಗುರುತು ಮೂಡಿಸಿಕೊಂಡಿದ್ದಾರೆ. ಸಾವಿರಾರು ನಾಟಕಗಳು ಹಾಗೂ ನೂರಾರು ಸಿನಿಮಾಗಳ ಮೂಲಕ ಅವರು ತಮ್ಮ ಬಹುಮುಖ ಪ್ರತಿಭೆಯನ್ನು ತೋರಿಸಿದ್ದಾರೆ.
ಸ್ವರ್ಣಲತಾ ಅವರ ಅಂತಿಮ ವಿಧಿಗಳು ಹೈದರಾಬಾದ್ನಲ್ಲಿ ಕುಟುಂಬದವರ ಸಮ್ಮುಖದಲ್ಲಿ ನೆರವೇರಲಿದ್ದು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











