Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಸಂಚಾರ ನಾಟಕೋತ್ಸವ – 26 | ಚಿತ್ರದುರ್ಗದಲ್ಲಿ ಏಪ್ರಿಲ್ 12 ರಿಂದ 14ರವರೆಗೆ ಮೂರು ನಾಟಕಗಳ ಪ್ರದರ್ಶನ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಪಿಳ್ಳೆಕೆರೇನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆ ಆವರಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ರಂಗ ಸೌರಭ ಕಲಾಸಂಘ, ಬಾಪೂಜಿ ಸಮೂಹ ಸಂಸ್ಥೆಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶಿವಸಂಚಾರ ನಾಟಕೋತ್ಸವ 26 ಅಂಗವಾಗಿ ಮೂರು ನಾಟಕಗಳ ಪ್ರದರ್ಶನವನ್ನು ಏಪ್ರಿಲ್ 12 ರಿಂದ 14ರವರೆಗೆ ಪ್ರತಿದಿನ ಸಂಜೆ 6-30ಕ್ಕೆ ಹಮ್ಮಿಕೊಳ್ಳಲಾಗಿದೆ.

ಏಪ್ರಿಲ್ 12ರಂದು ಸಂಜೆ 6-30ಕ್ಕೆ ಪರಮಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರಚಿತ ಜಂಗಮದಡೆಗೆ ನಾಟಕ ಆರ್. ಜಗದೀಶ್ ನಿರ್ದೇಶನದಲ್ಲಿ ಶಿವಾಸಂಚಾರ ಕಲಾವಿದರು ಅಭಿನಯಿಸಲಿದ್ದಾರೆ.

13 ರಂದು ಸಂಜೆ 6:30ಕ್ಕೆ ಕೃಷ್ಣಮೂರ್ತಿ ಮೂಡಬಾಗಿಲು ಇವರ ರಚನೆ, ನಿರ್ದೇಶನ, ವಿನ್ಯಾಸ ಪರಿಕಲ್ಪನೆಯಲ್ಲಿ ಕಳ್ಳರಸಂತೆ ನಾಟಕ ಪ್ರದರ್ಶನಗೊಳ್ಳಲಿದೆ.

ಏಪ್ರಿಲ್ 14ರಂದು ಸಂಜೆ 6-30 ಕ್ಕೆ ಪರಮಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರಚಿತ ಶಿವಯೋಗಿ ಸಿದ್ದರಾಮೇಶ್ವರ ನಾಟಕ ಪ್ರದರ್ಶನಗೊಳ್ಳಲಿದೆ.

ಶಿವ ಸಂಚಾರದ ನಾಟಕ ಪ್ರದರ್ಶನಗಳ ಕಾರ್ಯಕ್ರಮಕ್ಕೆ ನಗರದ ಸಮಸ್ತ ಕಲಾವಿದರು, ಸಾಹಿತಿಗಳು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಂಗ ನಿರ್ದೇಶಕ ಕೆ.ಪಿ.ಎಂ ಗಣೇಶಯ್ಯ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...