Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಪತ್ರಿಕೆ ಓದು ಅವಶ್ಯ; ಗೌನಹಳ್ಳಿ ಗೋವಿಂದಪ್ಪ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 13 : ಶಿಕ್ಷಣವು ಕೇವಲ ನಾಲ್ಕು ಗೋಡೆಗಳೊಳಗೆ ಪಾಠ ಕಲಿಯುವುದಕ್ಕೆ ಸೀಮಿತವಾಗಿಲ್ಲ. ಸಮಾಜದ ಸ್ಥಿತಿ, ಆಡಳಿತ ವ್ಯವಸ್ಥೆ, ಸಮಕಾಲೀನ ಘಟನೆಗಳು ಹಾಗೂ ಸಾಮಾನ್ಯ ಜ್ಞಾನವನ್ನು ಅರ್ಥಮಾಡಿಕೊಳ್ಳಲು ದಿನಪತ್ರಿಕೆಗಳ ಓದು ಅತ್ಯಂತ ಅಗತ್ಯ ಎಂದು ಹಿರಿಯ ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ತಿಳಿಸಿದರು.

ತಾಲ್ಲೂಕಿನ ದ್ವಾಮವ್ವನಹಳ್ಳಿಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯಿಂದ ಸೋಮವಾರ ಆಯೋಜಿಸಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿ ಜೀವನದಲ್ಲಿ ದಿನಪತ್ರಿಕೆ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು.

 

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪತ್ರಿಕೆಗಳು ಸಾಮಾನ್ಯ ಜ್ಞಾನ, ಸಮಕಾಲೀನ ಮಾಹಿತಿ ಹಾಗೂ ಸಮಾಜದ ಸಮಸ್ಯೆಗಳ ಅರಿವಿಗೆ ಪ್ರಮುಖ ಮೂಲವಾಗಿವೆ ಎಂದು ತಿಳಿಸಿದರು.

 

ಪತ್ರಿಕೆ ಜಗತ್ತನ್ನು ನೋಡುವ ಕಿಟಕಿಯಂತಿದೆ. ಆಡಳಿತದ ತಪ್ಪುಗಳನ್ನು ಪ್ರಶ್ನಿಸುವುದು, ಅನ್ಯಾಯವನ್ನು ಬೆಳಕಿಗೆ ತರುವುದು ಮತ್ತು ಸಮಾಜದ ದಿಕ್ಕು ತಿದ್ದುವುದು ಪತ್ರಿಕೋದ್ಯಮದ ಮಹತ್ವದ ಕರ್ತವ್ಯ ಎಂದು ಹೇಳಿದರು.
ಪತ್ರಿಕೆಗಳು ಕೇವಲ ಸುದ್ದಿಗಳಿಗೆ ಸೀಮಿತವಾಗಿಲ್ಲ. ಕ್ರೀಡೆ, ಸಾಹಿತ್ಯ, ವ್ಯಂಗ್ಯಚಿತ್ರ, ವಿಶೇಷ ಪುರವಣಿಗೆಗಳು, ಮನರಂಜನೆ ಮತ್ತು ಚುಟುಕು ಬರಹಗಳ ಮೂಲಕ ಓದುಗರ ಬದುಕನ್ನು ಸಮೃದ್ಧಗೊಳಿಸುತ್ತವೆ ಎಂದರು.
ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಆನ್‌ಲೈನ್ ಪತ್ರಿಕೆಗಳನ್ನೂ ಪ್ರತಿದಿನ ಕನಿಷ್ಠ ಹತ್ತು ನಿಮಿಷ ಓದಿದರೆ ಭವಿಷ್ಯ ಉಜ್ವಲವಾಗುತ್ತದೆ ಹಾಗೂ ಬದುಕು ಹಸನಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಾಚಕರು ತಮ್ಮ ಅಭಿಪ್ರಾಯಗಳನ್ನು ‘ವಾಚಕರ ವಾಣಿ’ ಮೂಲಕ ಪತ್ರಿಕೆಗಳಿಗೆ ಕಳುಹಿಸಿದರೆ ಸರ್ಕಾರದ ಗಮನಕ್ಕೂ ಸಮಸ್ಯೆಗಳು ತಲುಪುತ್ತವೆ. ಎಲ್ಲರೂ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಂಡರೆ ಜ್ಞಾನ ವಿಸ್ತಾರವಾಗುತ್ತದೆ, ಸಮಾಜದ ಬಗ್ಗೆ ಜಾಗೃತಿ ಹೆಚ್ಚುತ್ತದೆ ಮತ್ತು ಬದುಕು ಹಸನಾಗುತ್ತದೆ ಎಂದು ಅವರು ಹೇಳಿದರು.

 

ವಿದ್ಯಾರ್ಥಿಗಳ ಜೀವನದಲ್ಲಿ ಎನ್‌ಎಸ್‌ಎಸ್ ಸೇವಾ ಚಟುವಟಿಕೆಗಳು ತಾಳ್ಮೆ, ಶಿಸ್ತು ಮತ್ತು ಸೇವಾ ಗುಣಗಳನ್ನು ಬೆಳೆಸುತ್ತವೆ. ಸ್ವಚ್ಛತಾ ಸೇವೆ, ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಜವಾಬ್ದಾರಿತನ ಮೂಡುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಬಂದಿರುವ ಪ್ರತಿಯೊಬ್ಬರೂ ಸಮಾಜದ ವ್ಯವಹಾರಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಮಾದಾರ ಚನ್ನಯ್ಯ ಗುರುಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ರಾಘವೇಂದ್ರ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಆಯೋಜಿಸಲಾಗುವ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿವೆ. ಒಗ್ಗಟ್ಟಿನ ಜೀವನ, ಶಿಸ್ತು ಹಾಗೂ ಗುರಿ ಸಾಧನೆಯ ಮೌಲ್ಯಗಳನ್ನು ಕಲಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ತಿಳಿಸಿದರು.
ಗ್ರಾಮೀಣ ಜನರ ಬದುಕಿನ ನೈಜ ಚಿತ್ರಣವನ್ನು ಹತ್ತಿರದಿಂದ ಅರಿಯುವ ಅವಕಾಶ ಶಿಬಿರಗಳ ಮೂಲಕ ಸಿಗುತ್ತದೆ. ಒಂದಾಗಿ ಜೀವನ ಸಾಗಿಸುವುದು, ಪರಸ್ಪರ ಸಹಕಾರದ ಮನೋಭಾವ ಬೆಳೆಸಿಕೊಳ್ಳುವುದು ಮತ್ತು ಸಮಾಜಮುಖಿ ಚಿಂತನೆ ರೂಪಿಸಿಕೊಳ್ಳುವುದು ಇಂತಹ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಲು ಇವು ನೆರವಾಗುತ್ತವೆ ಎಂದರು.

ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದೆ. ದಿನಪತ್ರಿಕೆ ಓದುವ ಅಭ್ಯಾಸದ ಅಗತ್ಯತೆ ಇನ್ನಷ್ಟು ಹೆಚ್ಚಾಗಬೇಕು. ಪ್ರತಿದಿನ ಕನಿಷ್ಠ 30 ನಿಮಿಷ ಪತ್ರಿಕೆ ಓದುವುದರಿಂದ ವಿದ್ಯಾರ್ಥಿಗಳಲ್ಲಿ ಜ್ಞಾನ ವಿಸ್ತಾರವಾಗುವುದರ ಜೊತೆಗೆ ತಾಳ್ಮೆ, ಚಿಂತನಾ ಶಕ್ತಿ ಮತ್ತು ದೇಶದ ಹಿತಾಸಕ್ತಿಯ ಅರಿವು ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಪುಸ್ತಕ ಹಾಗೂ ಪತ್ರಿಕೆಗಳು ಜೀವನದ ಮೊದಲ ಪಾಠ. ಪ್ರಾರಂಭದಿAದಲೇ ಓದುವ ಅಭ್ಯಾಸ ರೂಢಿಸಿಕೊಂಡರೆ ವ್ಯಕ್ತಿತ್ವ ವಿಕಾಸಕ್ಕೆ ಬಲ ಸಿಗುತ್ತದೆ. ಮಾಹಿತಿ ಅಂಗೈಯಲ್ಲೇ ಸಿಗುವ ಕಾಲದಲ್ಲಿಯೂ ಪತ್ರಿಕೆ ಓದಿನ ಮಹತ್ವ ಕಡಿಮೆಯಾಗಬಾರದು ಎಂದರು. ಹಿರಿಯ ಪತ್ರಕರ್ತ ವೀರೇಂದ್ರ ಕೋಗುಂಡೆ ಮಠ, ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಡಾ.ಎನ್.ಧನಕೋಟಿ, ಸಹ ಶಿಬಿರಾಧಿಕಾರಿಗಳಾದ ರಿಂಕಿ ಸುರೇಶ್, ಫೂಬಾಲನ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...