ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನಗರದ ವಿಪಿ ಬಡಾವಣೆ ನಿವಾಸಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಸಹಾಯಕ ಆಯುಕ್ತರಾದ ಏಕಾಂತಪ್ಪ (96 ವರ್ಷ) ಇಂದು ಬೆಳಿಗ್ಗೆ ಏಳು ಗಂಟೆಗೆ ನಿಧನರಾದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಿದರಿಕೆರೆ ಗ್ರಾಮದ ಮೃತರ ತೋಟದಲ್ಲಿ ಇಂದು ಸಂಜೆ 5:00ಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.













