Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಬಸವೇಶ್ವರರ ಜಯಂತಿ: ಅದ್ದೂರಿ ಮೆರವಣಿಗೆ

---Advertisement---

ಚಿತ್ರದುರ್ಗ : ಏ.20: ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮುಂಭಾಗ ಸಾರೋಟಿನಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ನಾದಸ್ವರ, ತ್ರಾಷ್ ವಾದ್ಯ, ಚಂಡೆ ವಾದನ, ವೀರಗಾಸೆ, ಯಕ್ಷಗಾನ, ಕಹಳೆ ನಾದ, ಬ್ರಾಸ್ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು. ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾದ ಮೆರವಣಿಗೆಯು ಆನೆಬಾಗಿಲು, ದೊಡ್ಡಪೇಟೆ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಶ್ರೀ ನೀಲಕಂಠೇಶ್ವರ ದೇವಸ್ಥಾನದವರೆಗೂ ನಡೆಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ವೀರಶೈವ ಸಮಾಜದ ಮುಖಂಡರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...