Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ ಪೊಲೀಸರಿಂದ ನಾಲ್ವರು ಟಿಪ್ಪರ್ ಲಾರಿ ಕಳ್ಳರ ಬಂಧನ : ನಗದು ಮತ್ತು ವಾಹನಗಳು ವಶಕ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಟಿಪ್ಪರ್ ಲಾರಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಚಳ್ಳಕೆರೆ ಪೊಲೀಸರು ಬಂಧಿಸಿ ಅವರಿಂದ 05 ಲಕ್ಷ ನಗದು ಮತ್ತು 02 ಲಕ್ಷ 50 ಸಾವಿರ ಮೌಲ್ಯದ ಲಾರಿಯ ಬಿಡಿ ಭಾಗಗಳು ಮತ್ತು 08 ಲಕ್ಷ ಮೌಲ್ಯದ ಕಾರು ವಶಪಡಿಸಿಕೊಂಡಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಮೂಲದ ಸಯೀಂ ಪಾಷ, ರಶೀದ್ ಖಾನ್, ನಂದೀಶ್ ಕುಮಾರ್ ಮತ್ತು ಮೊಹಮದ್ ಮುಬಾರಕ್ ಬಂಧಿತರು.

ಘಟನೆ ಹಿನ್ನೆಲೆ :
ದಿನಾಂಕ :06.12.2025 ರಂದು ರಾತ್ರಿ ಚಳ್ಳಕೆರೆ ಟೌನ್ ಬಳ್ಳಾರಿ ರಸ್ತೆಯಲ್ಲಿ ಗೋವರ್ಧನ ವೆಲ್ಡಿಂಗ್ ಶಾಪ್ ಬಳಿ ನಿಲ್ಲಿಸಿದ್ದ ಕರುಣಪ್ರಸಾದ್ ರವರ ಟಿಪ್ಪರ್ ಲಾರಿಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ, ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಭಂಡಾರು,ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.
ಶಿವಕುಮಾರ್.ಆರ್ ರವರು ಮತ್ತು ಸತ್ಯನಾರಾಯಣರಾವ್ ಎಂ.ಜಿ ಪೊಲೀಸ್ ಉಪಾಧೀಕ್ಷಕರು, ಚಳ್ಳಕೆರೆ ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕರಾದ ಕುಮಾರ್.ಕೆ ರವರ ನೇತೃತ್ವದಲಿ., ಪಿಎಸ್‌ಐ ಶಿವರಾಜ್.ಜೆ ಮತ್ತು ಸಿಬ್ಬಂದಿಯವರ ತಂಡವನ್ನು ನೇಮಿಸಿರುತ್ತಾರೆ.

ಈ ತಂಡವು ತನಿಖೆ ಮಾಡಿ ನಾಲ್ವರು ಆರೋಪಿಗಳನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಚಿತ್ರದುರ್ಗ ಕೋಟೆ ಠಾಣೆ ವ್ಯಾಪ್ತಿಯಲ್ಲಿ,-01, ದಾವಣಗೆರೆ ಆರ್.ಎಂ.ಸಿ ಠಾಣಾ -02, ಬಳ್ಳಾರಿ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ 01, ರಾಣೆಬೆನ್ನೂರು ನಗರ ಠಾಣಾ ವ್ಯಾಪ್ತಿಯಲ್ಲಿ 01 ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದರೆಂದು ತಿಳಿದುಬಂದಿದೆ. ಇವರಿಂದ 05 ಲಕ್ಷ ನಗದು ಹಣ, ಅಂದಾಜು 02 ಲಕ್ಷ 50 ಸಾವಿರ ಮೌಲ್ಯದ ಲಾರಿಯ ಬಿಡಿ ಭಾಗಗಳು, ಮತ್ತು ಕೃತ್ಯಕ್ಕೆ ಉಪಯೋಗಿಸಿದ Xylo ಕಾರು ಅಂದಾಜು ಬೆಲೆ 08 ಲಕ್ಷ, ಇವೆಲ್ಲವುಗಳ ಒಟ್ಟು ಮೊತ್ತ 15,50,000/- ಮೌಲ್ಯದ ನಗದು ಮತ್ತು ಕಾರನ್ನು ವಶಕ್ಕೆ ಪಡೆದಿರುತ್ತಾರೆ.

ಪೊಲೀಸ್ ಅಧೀಕ್ಷಕರು ಚಳ್ಳಕೆರೆ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now