ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಏಪ್ರಿಲ್ 20 ರಿಂದ ಆರಂಭವಾಗಿ ಏಪ್ರಿಲ್ 26 ರ ವರೆಗೂ ನಡೆಯುವ ವಾಸವಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಪ್ತೋತ್ಸವ ದಡಿಯಲ್ಲಿ ಆಯೋಜಿಸಲಾಗಿರುವುದಾಗಿ ಆರ್ಯವೈಶ್ಯ ಸಂಘದ ಉಪಾಧ್ಯಕ್ಷರಾದ ಎಂ.ಎಚ್. ಮಂಜುನಾಥ್ ರವರು ಹೇಳಿದರು.

ನಗರದ ವಾಸವಿಮಹಲ್ ನಲ್ಲಿ ಆಯೋಜಿಸಿದ್ದ ವಾಸವಿ ಜಯಂತಿ ಅಂಗವಾಗಿ ದೇವಾಲಯದ ರಾಜಗೋಪುರದ ವಾರ್ಷಿಕೋತ್ಸವ ಹಾಗು ಸಪ್ತೋತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಸಹಸಂಸ್ಥೆಗಳ ಮೂಲಕ ಕಾರ್ಯಕ್ರಮ ನಡೆಸುತ್ತಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು. ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಒಳಗೊಂಡು ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
















