Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನಲ್ಲಿ ಏಪ್ರಿಲ್ 30 ರಿಂದ ಮೇ 02 ರವರೆಗೆ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ, ಸಾಂಸ್ಕೃತಿಕ ಶಿಬಿರ : ಯೋಗೀಶ್ ಸಹ್ಯಾದ್ರಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ಈ ವರ್ಷ ತುಮಕೂರಿನಲ್ಲಿ ಮಕ್ಕಳಿಗಾಗಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ, ಸಾಂಸ್ಕೃತಿಕ ಶಿಬಿರ ಆಯೋಜಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಸಹ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

ತುಮಕೂರಿನ ಕೊರಟಗೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ಸಿದ್ಧರಬೆಟ್ಟದಲ್ಲಿ ಏಪ್ರಿಲ್ 30 ರಿಂದ ಮೇ 02 ರ ವರೆಗೆ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ನಾಡಿನ ಖ್ಯಾತ ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಮಕ್ಕಳಿಗೆ ಸಾಹಿತ್ಯ, ಸಂಸ್ಕೃತಿ, ಕಲೆ ಯೋಗ, ಚಾರಣ, ಚಿತ್ರ ಕಲೆ, ಜಾನಪದ, ಸಂಗೀತ, ವಿಜ್ಞಾನ, ಭಾಷೆ ಹಾಗೂ ನಾಟಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

6 ನೇ ತರಗತಿಯಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಇರಲಿದೆ. ಮಕ್ಕಳು ಲಘು ಹೊದಿಕೆ, ಹಾಸಿಗೆ, ತಟ್ಟೆ, ಲೋಟ ಹಾಗೂ ದಿನಬಳಕೆಯ ವಸ್ತುಗಳನ್ನು ಸ್ವತಃ ತರಬೇಕು. ಚಿತ್ರದುರ್ಗ ಜಿಲ್ಲೆಯಿಂದ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ (9972240239), ಉಪಾಧ್ಯಕ್ಷ ಬಿ. ವಿಜಯ್ ಕುಮಾರ್ (96867 24546), ಕಾರ್ಯದರ್ಶಿ ಮಾರುತಿ ನಾಯ್ಕ್ (9986336164) ಇವರನ್ನು ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಬಹುದು ಎಂದು ಮಸಾಪ ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)