ಬೆಂಗಳೂರು: ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಪರಿಸ್ಥಿತಿ ಗಂಭೀರವಾಗಿತ್ತು. ಈಗ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಶಾಸಕ ವಿರೇಂದ್ರ ಪಪ್ಪಿ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯ ಬಹಳ ಉತ್ತಮವಾಗಿದೆ. ಚಿಕಿತ್ಸೆಗೆ ಸ್ಪಂದಿಸ್ತಾ ಇದ್ದಾರೆ ಅಂತ ಇವತ್ತು ಬೆಳಗ್ಗೆ ಕೂಡ ಬರ್ತಾ, ದೂರವಾಣಿ ಮುಖಾಂತರ ಕೇಳಿದಾಗ ನಿನ್ನೆಗಿಂತ ಇಂದು ಹೆಚ್ಚಿನದಾಗಿ ಚಿಕಿತ್ಸೆಗೆ ಸ್ಪಂದಿಸ್ತಾ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದಿದ್ದಾರೆ.
ಲಂಗ್ಸ್ ಇನ್ಫೆಂಕ್ಷನ್ ಯಾವುದರಿಂದ ಆಗಿದೆ ಎಂಬುದರ ಬಗ್ಗೆ ಖಚಿತವಾದ ಮಾಹಿತಿ ನನಗಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯ ಮಾಹಿತಿ ಹೇಳ್ತಾ ಇದ್ದಾರೆ. ಅವರ ಕುಟುಂಬದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.
ಸಚಿವ ಡಿ ಸುಧಾಕರ್ ಅವರು ಶ್ವಾಸಕೋಸ ಸಂಬಂಧ ಕಾಯಿಲೆಗೆ ಚಿಕಿತ್ಸೆಯನ್ನ ಪಡೆಯುತ್ತಿದ್ದರು. ಗಂಭೀರವಾಗಿದ್ದು, ಯಶವಂತಪುರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಹೆಚ್ವಿನ ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಡಾ.ವೆಂಕಟಗಿರಿ ನೇತೃತ್ವದಲ್ಲಿ ಶ್ವಾಸಕೋಶ ಟ್ರಾನ್ಸಪ್ಲಾಂಟೇಷನ್ ಗೆ ಸಿದ್ಧತೆ ಮಾಡಿಕೊಳ್ಳಲಾಗ್ತಾ ಇದೆ ಎಂಬ ಮಾಹಿತಿ ಕೂಡ ಇದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಮೊಣಕಾಲು ನೋವಿನ ಚಿಕಿತ್ಸೆಗೂ ಅಡ್ಮಿಟ್ ಆಗಿದ್ದರು. ಅದೇ ಸಮಯದಲ್ಲಿ ಶ್ವಾಸಕೋಶದಲ್ಲಿ ಸಮಸ್ಯೆ ಇರುವುದು ತಿಳಿದು ಬಂದಿದೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರ ಬೆಂಬಲಿಗರು ಹಾಗೂ ಆಪ್ತರು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಅವರ ಕುಟುಂಬಸ್ಥರಿಗಂತೂ ಇದು ದೊಡ್ಡ ಆಘಾತವನ್ನೇ ತಂದೊಡ್ಡಿದೆ. ವೈದ್ಯರು ಕೂಡ ಚಿಕಿತ್ಸೆಗೆ ಸ್ಪಂದಿಸ್ತಾ ಇದ್ದಾರೆ ಎಂಬ ಮಾಹಿತಿಯನ್ನ ನೀಡಿದ್ದಾರೆ. ಇದೀಗ ಶಾಸಕ ಪಪ್ಪಿ ಕೂಡ ಅದೇ ವಿಚಾರವನ್ನ ತಿಳಿಸಿದ್ದಾರೆ.
















