Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏಪ್ರಿಲ್ 26 ರಂದು ಹೆಚ್.ಎಸ್.ಟಿ. ಸ್ವಾಮಿರವರ ನಾ ಕಂಡ ಖಗೋಳ ಪುಸ್ತಕ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಏ. 24 : ಚಿತ್ರದುರ್ಗ ಸೈನ್ಸ್ ಫೌಂಡೇಶನ್(ರಿ), ಚಿತ್ರದುರ್ಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಚಿತ್ರದುರ್ಗ ಹಾಗೂ ಸಿಲಿಕಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ವಿಜ್ಞಾನ ಲೇಖಕ ಹೆಚ್.ಎಸ್.ಟಿ. ಸ್ವಾಮಿರವರ ಕನ್ನಡ ವಿಜ್ಞಾನ ಕೃತಿ ನಾ ಕಂಡ ಖಗೋಳ ಬಿಡುಗಡೆ ಸಮಾರಂಭವು ಏ. 26ರ ಭಾನುವಾರ ಬೆಳಿಗ್ಗೆ 10.30ಕ್ಕೆ ಜೋಗಿಮಟ್ಟಿ ಸರ್ಕಲ್‍ನ ಐ.ಎಂ.ಎ. ಹಾಲ್‍ನಲ್ಲಿ ನಡೆಯಲಿದೆ.

ಪುಸ್ತಕ ಬಿಡುಗಡೆ ಹಾಗೂ ಕೃತಿಯ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಗಳಾದ ಶ್ರೀನಾಥ್ ರತ್ನಾಕರರವರು ನೇರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನ ಅಧ್ಯಕ್ಷರಾದ ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ ವಹಿಸಲಿದ್ದಾರೆ.

ಜಿಲ್ಲಾ ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಡಾ. ಕೆ.ಎಂ. ವೀರೇಶ್, ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನ ಉಪಾಧ್ಯಕ್ಷರಾದ ಚಳ್ಳಕೆರೆ ಯರಿಸ್ವಾಮಿ, ಸಿಲಿಕಾನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವ್ಯವಸ್ಥಾಪಕರಾದ ಡಿ. ಗೋಪಾಲಸ್ವಾಮಿ ನಾಯಕ, ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನ ಖಜಾಂಚಿ, ಕೆ.ವಿ. ನಾಗಲಿಂಗರೆಡ್ಡಿ, ನಿರ್ದೇಶಕರಾದ ಡಾ|| ಈ. ರುದ್ರಮುನಿ ವಿಜ್ಞಾನ ಲೇಖಕರು ಹಾಗೂ ಕಾರ್ಯದರ್ಶಿ, ಹೆಚ್.ಎಸ್.ಟಿ. ಸ್ವಾಮಿ ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...