Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ  ಮೇಲೆ ದಾಳಿ: ಗ್ಯಾಂಗ್ ವಿರುದ್ಧ ಎಫ್‌ಐಆರ್

---Advertisement---

ದಾವಣಗೆರೆ ಉಪಚುನಾವಣೆಯ ಅಭ್ಯರ್ಥಿ ಹಾಗೂ ‘ಯಂಗ್ ಸ್ಟಾರ್ ಎಂಪೋರಿಯಂ’ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಹಬಾಜ್ ಖಾನ್ ಮೇಲೆ ಬೆಂಗಳೂರಿನಲ್ಲಿ ದಾಳಿ ನಡೆದಿದ್ದು, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದೆ.ಕೆಲ ದಿನಗಳ ಹಿಂದೆ ಶಹಬಾಜ್ ಖಾನ್ ಅವರಿಗೆ ಹಲ್ಲೆ ನಡೆಸುವುದಾಗಿ ಹಾಗೂ ಕಸದ ಬುಟ್ಟಿಗೆ ಎಸೆಯುವುದಾಗಿ ಬೆದರಿಕೆ ಬಂದಿತ್ತು. ಅದರಂತೆಯೇ ನಗರದ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರ ನಿವಾಸಕ್ಕೆ ನುಗ್ಗಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ದಾವಣಗೆರೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಇತ್ತೀಚೆಗೆ ಬೆಂಗಳೂರಿಗೆ ಮರಳಿದ್ದ ಶಹಬಾಜ್ ಖಾನ್ ವಿರುದ್ಧ ಮುಹಮ್ಮದ್ ವಸೀಂ ಎಂಬಾತ ಅವಹೇಳನಕಾರಿ ವೀಡಿಯೋ ಪ್ರಕಟಿಸಿದ್ದನು. ಈ ಸಂಬಂಧ ದಾವಣಗೆರೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬಳಿಕ ಅದೇ ಪಕ್ಷದ ಹಸೀನಾ ಬಾನು ಕೂಡ ವೀಡಿಯೋ ಮೂಲಕ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಕೋಪಗೊಂಡ ಶಹಬಾಜ್ ಖಾನ್, ಹಸೀನಾ ಬಾನುವನ್ನು ಪಕ್ಷದಿಂದ ವಜಾಗೊಳಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಹಸೀನಾ ಬಾನು, ಝೈದ್, ನಿಲೂಫರ್ ಹಾಗೂ ಮುಹಮ್ಮದ್ ವಸೀಂ ಸೇರಿದಂತೆ 5-6 ಮಂದಿ ಸೇರಿಕೊಂಡು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯಲ್ಲಿ ಗಾಯಗೊಂಡ ಶಹಬಾಜ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಭದ್ರತೆ ಕುರಿತ ಪ್ರಶ್ನೆಗಳು ಉದ್ಭವಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...