ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 25: ನಗರದ ವಿವಿಧ ಪ್ರದೇಶಗಳಲ್ಲಿ ಹೈ ಟೆಕ್ ಆಟೋ ಸ್ಟ್ಯಾಂಡ್ ಮತ್ತು ಟ್ಯಾಕ್ಸಿ ಸ್ಟ್ಯಾಂಡ್ ಗಳನ್ನ ನಿರ್ಮಿಸಬೇಕೆಂದು ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರು ಶನಿವಾರ ನಗರಸಭೆ ಪೌರಯುಕ್ತೆ ಲಕ್ಷ್ಮಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ದಿನನಿತ್ಯ ಸಾವಿರಾರು ನಾಗರಿಕರಿಗೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರು ಸೂಕ್ತವಾದ ಅಟೋ ತಂಗುದಾಣಗಳ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಗರದ ಅನೇಕ ಪ್ರಮುಖ ಸ್ಥಳಗಳಲ್ಲಿ ಅಟೋ ಸ್ಟಾಂಡ್ ವ್ಯವಸ್ಥೆ ಇಲ್ಲದ ಕಾರಣ, ಆಟೋ ಸವಾರರು ಬಿಸಿಲು, ಮಳೆ ಮತ್ತು ಇತರ ಅನಾನುಕೂಲಕರ ಪರಿಸ್ಥಿತಿಗಳಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ನಗರದಲ್ಲಿ ಪ್ರಮುಖ ವೃತ್ತಗಳು, ಬಸ್ ನಿಲ್ದಾಣಗಳ ಬಳಿ, ಸರ್ಕಾರಿ ಕಚೇರಿಗಳ ಸುತ್ತಮುತ್ತ ಹಾಗೂ ಜನಸಂಚಾರ ಹೆಚ್ಚು ಇರುವ ಪ್ರದೇಶಗಳಲ್ಲಿ ಹೈ ಟೆಕ್ ಆಟೋ ಸ್ಟ್ಯಾಂಡ್ ಮತ್ತು ಟ್ಯಾಕ್ಸಿ ಸ್ಟ್ಯಾಂಡ್ ಗಳನ್ನು ನಿರ್ಮಿಸುವುದು ಅತ್ಯಂತ ಅಗತ್ಯವಾಗಿದೆ. ಈ ಸ್ಟ್ಯಾಂಡ್ಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ, ಶೆಡ್, ಕುಡಿಯುವ ನೀರಿನ ವ್ಯವಸ್ಥೆ, ಬೆಳಕು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿದರೆ ಆಟೋ ಚಾಲಕರಿಗೆ ಬಹಳ ಉಪಕಾರವಾಗುತ್ತದೆ ಎಂದು ಮನವಿಯನ್ನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಅಧ್ಯಕ್ಷ ರವೀಂದ್ರ ಚಿನ್ನು , ಕಾರ್ಯದರ್ಶಿ ಸಲೀಂ ಸದಸ್ಯರಾದ ದರ್ಶನ್, ಮಿಥುನ್ ಇದರು.


















