Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಜಾಮೀನು ಅರ್ಜಿಯನ್ನು ಮೇ 4ಕ್ಕೆ‌ಕಾಯ್ದಿರಿಸಿದ ಕೋರ್ಟ್

---Advertisement---

ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂ ಮೊರೆ ಹೋಗಿದ್ದಾರೆ. ಇಷ್ಟು ದಿನ ಟ್ರಯಲ್ ನಡೆಯುತ್ತಿದ್ದ ಸಲುವಾಗಿ ಜಾಮೀನು ಸಲ್ಲಿಸುವ ಸಾಹಸಕ್ಕೆ ಹೋಗಿರಲಿಲ್ಲ. ಇದೀಗ ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ಮೇ 4ರಂದು ನಡೆಸಲು ಸುಪ್ರೀಂ ಕಾಯ್ದಿರಿಸಿದೆ. ಈ ಹಿಂದೆ ಜಾಮೀನು ಪಡೆದಿದ್ದ ದರ್ಶನ್, ಮತ್ತೆ ಜಲು ಸೇರುವಂತೆ ಆಗಿತ್ತು. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ದರ್ಶನ್ ಅವರು ಎ2 ಆರೋಪಿ ಸ್ಥಾನದಲ್ಲಿದ್ದಾರೆ. ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಈ ಹಿಂದೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಟ್ರಯಲ್ ಸಂದರ್ಭದಲ್ಲಿ ಜಾಮೀನು ಸಿಗದ ಕಾರಣ ದರ್ಶನ್ ಪರ ವಕೀಲರು ಈಗ ಜಾಮೀನು ಅರ್ಜಿ ಸಲ್ಲಿಕೆ ಬೇಡ ಎಂಬ ಸಲಹೆಯನ್ನ ನೀಡಿದ್ದರು ಎನ್ನಲಾಗಿದೆ.

ಸದ್ಯ ಎಲ್ಲಾ ಟ್ರಯಲ್ ಮುಗಿದಿದೆ. ಹೀಗಾಗಿ ಜಾಮೀನಿಗೆ ಅರ್ಜಿ ಸಲ್ಲಿಕೆಯನ್ನ ಮಾಡಿದ್ದಾರೆ. ಈ ಮೊದಲು ಮೆಡಿಕಲ್ ಕಂಡೀಷನ್ ಬಗ್ಗೆಯೇ ಕಾರಣ ಹೇಳಿ ಜಾಮೀನು ಪಡೆದಿದ್ದರು. ಸದ್ಯ ಜೈಲಿನಲ್ಲಿಯೇ ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಈಗ ಅದೇ ಕಾರಣ ಹೇಳಿ ಜಾಮೀನು ಅರ್ಜಿ ಹಾಕಿದ್ದರೂ, ಕೋರ್ಟ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...