Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರಿ ಮಳೆಗೆ ಸಿಎಂ ನಿವಾಸಕ್ಕೂ ಆಘಾತ: ‘ಕೃಷ್ಣ’ ಕಾಂಪೌಂಡ್ ಮೇಲೆ ಮರ, ಕಬ್ಬಿಣದ ವಾಲ್ ಕುಸಿತ

---Advertisement---

ರಾಜಧಾನಿ ಬೆಂಗಳೂರು ನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಯ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಈ ಅವಾಂತರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸವೂ ತಪ್ಪಿಸಿಕೊಳ್ಳಲಿಲ್ಲ. ಸಿಎಂ ಅವರ ಗೃಹ ಕಚೇರಿ ‘ಕೃಷ್ಣ’ ಕಾಂಪೌಂಡ್ ಮೇಲೆ ದೊಡ್ಡ ಮರದ ಕೊಂಬೆಗಳು ಹಾಗೂ ಕಬ್ಬಿಣದ ವಾಲ್‌ಗಳು ಕುಸಿದು ಬಿದ್ದಿವೆ.

ಸಿಎಂ ಮನೆದಲ್ಲಿದ್ದ ಸಮಯದಲ್ಲೇ ಈ ಘಟನೆ ನಡೆದಿದ್ದು, ಭಾರಿ ಗಾಳಿ-ಮಳೆಯ ಹೊಡೆತಕ್ಕೆ ಕಾಂಪೌಂಡ್ ಪಕ್ಕದಲ್ಲಿದ್ದ ಬೃಹತ್ ಮರದ ಕೊಂಬೆಗಳು ಉರುಳಿ, ಗೋಡೆ ಮೇಲಿನ ಕಬ್ಬಿಣದ ವಾಲ್‌ಗಳು ಕುಸಿದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಹಾನಿ ಸಂಭವಿಸಿಲ್ಲ.ಮಳೆಯ ಪ್ರಮಾಣದ ವಿಚಾರಕ್ಕೆ ಬಂದರೆ, ಬುಧವಾರ ಸಂಜೆ ಮತ್ತು ರಾತ್ರಿ ಸೇರಿ ನಗರದಲ್ಲಿ ಸುಮಾರು 111 ಮಿ.ಮೀ ಮಳೆಯಾಗಿದೆ. ಇದು ಏಪ್ರಿಲ್ ತಿಂಗಳಲ್ಲಿಯೇ ದಾಖಲಾಗಿರುವ ಅಪರೂಪದ ಮಳೆಯಾಗಿದ್ದು, 2001ರ ದಾಖಲೆಗೂ ಸಮಾನವಾಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಈ ಮಳೆ ನಗರಾದ್ಯಂತ ರಸ್ತೆ ಜಲಾವೃತ, ಟ್ರಾಫಿಕ್ ಜಾಮ್, ಮರಗಳ ಉರುಳುವಿಕೆ ಸೇರಿದಂತೆ ಹಲವು ಸಮಸ್ಯೆಗಳನ್ನು ಉಂಟುಮಾಡಿದೆ.

ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸುರಕ್ಷತೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...