ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊ** ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಒಂದಷ್ಟು ಪ್ರಶ್ನೆಗಳನ್ನ ಕೇಳಿ, ನೋಟೀಸ್ ನೀಡಿದೆ. ಇಂದು ಸುಪ್ರೀಂ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರಾದ ಮುಕಲ್ ರೋಹ್ಟಗಿ ವಾದ ಮಂಡಿಸಿದರು.
ಈ ಕೇಸಿನ ಪ್ರಗತಿಯ ಬಗ್ಗೆ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ವಿಜಯ್ ಬಿಷ್ಣೋಯಿ ಅವರ ಪೀಠವು ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ. ಈ ವಿಚಾರಣೆಯನ್ನು ಮುಂದೂಡಲಾಗಿದೆ. ಇನ್ನು ದಿನಾಂಕ ಸೂಚಿಸಿಲ್ಲ. ಆದರೆ ಒಂದು ವಾರದ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಹಾಗಾದ್ರೆ ಸುಪ್ರೀಂ ಕೋರ್ಟ್ ಯಾವೆಲ್ಲಾ ಪ್ರಶ್ನೆಗಳನ್ನ ಕೇಳಿದೆ ಎಂಬ ಮಾಹಿತಿ ಇಲ್ಲಿದೆ. ಪ್ರಕರಣದಲ್ಲಿ ಇದುವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆಸಲಾಯ್ತು..? ಇನ್ನು ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿ ಇದೆ..? ಇಡೀ ಸಾಕ್ಷ್ಯ ವಿಚಾರಣೆ ಮುಗಿಯುವುದಕ್ಕೆ ಅಂದಾಜು ಎಷ್ಟು ಸಮಯ ಬೇಕಾಗಬಹುದು..? ನಿಯಮಾನುಸಾರ ದರ್ಶನ್ ಅವರಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆಯಾ..? ಇಲ್ಲವಾ..? ಎಂಬ ಪ್ರಶ್ನೆಗಳನ್ನ ಕೇಳಿದೆ. ಅದಕ್ಕೆ ಒಂದು ವಾರದ ಒಳಗೆ ಉತ್ತರಿಸುವುದಕ್ಕೂ ಸೂಚನೆ ನೀಡಿದೆ.
ಇನ್ನು ದರ್ಶನ್ ಪರ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದಾಗ ಆ ಅರ್ಜಿಯಲ್ಲಿ ಸಾಕ್ಷಿಗಳ ವಿಚಾರಣೆಯನ್ನು ತುಂಬಾ ನಿಧಾನ ಮಾಡುತ್ತಿರುವುದನ್ನು ಉಲ್ಲೇಖಿಸಲಾಗಿದೆ. ಜೈಲು ನಿಯಮಗಳಿಗೆ ವಿರುದ್ಧವಾಗಿ ಕ್ವಾರಂಟೈನ್ ಸೆಲ್ ನಲ್ಲಿ ಇಟ್ಟಿರುವುದು, ಸೌಲಭ್ಯ ಕೊಡದೆ ಇರುವುದು, ಕುಟುಂಬಸ್ಥರು ಬಂದಾಗ ಆತ್ಮೀಯವಾಗಿ ಮಾತನ್ನಾಡುವುದಕ್ಕೆ ಸಾಧ್ಯವಾಗದ ರೀತಿ ಬ್ಯಾರಿಕೇಡ್ ಹಾಕುವಂತದ್ದು, ಆರೋಗ್ಯ ಸನಸ್ಯೆ, ವೃತ್ತಿ ಜೀವನ, ಸಹ ಕೈದಿಗಳ ನಿಂದನೆ ಹೀಗೆ ಹಲವು ಮಾನಸಿಕ ಸಮಸ್ಯೆಯ ಬಗ್ಗೆಯೂ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















