Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾವೈಕ್ಯತೆಯ ಹರಿಕಾರ, ಆಧುನಿಕ ಸೂಫಿಸಂತ ಇಬ್ರಾಹಿಂ ಎನ್ ಸುತಾರ್ ನಿಧನ..!

Facebook
Twitter
Telegram
WhatsApp

 

ಬಾಗಲಕೋಟೆ: ಆಧುನಿಕ ಸೂಫಿಸಂತ ಇಬ್ರಾಹಿಂ ಎನ್ ಸುತಾರ್ ಇಂದು ನಿಧನರಾಗಿದ್ದಾರೆ. ಇವರಿಗೆ 82 ವರ್ಷವಾಗಿತ್ತು. ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಬ್ರಾಹಿಂ ಅವರು ಭಾವೈಕ್ಯತೆಯ ಹರಿಕಾರ ಎಂದೇ ಖ್ಯಾತಿ ಪಡೆದಿದ್ದವರು. ಪದ್ಮಶ್ರೀ ಪುರಸ್ಕೃತರು ಕೂಡ. ಮೇ 10, 1940ರಲ್ಲಿ ಜನಿಸಿದ ಇವರು, ವೈದಿಕ, ವಚನ, ಸೂಫಿ ಪರಂಪರೆಗಳನ್ನ ಕುರಿತು ಭಜನೆ, ಪ್ರವಚನ, ಸಂವಾದಗಳನ್ನ ಮಾಡುತ್ತಿದ್ದವರು. ಅದರಿಂದಲೇ ಇವರು ಸಾಕಷ್ಟು ಖ್ಯಾತಿ ಗಳಿಸಿದ್ದವರು.

ಕನ್ನಡದ ಕಬೀರ ಎಂದೇ ಹೆಸರು ಮಾಡಿದ್ದವರು. ಯಾವುದೇ ಕಾರ್ಯಕ್ರಮ ಮಾಡಿದ್ರು ಕೂಡ ಆ ಮೂಲಕ ಭಾವೈಕ್ಯತೆಯನ್ನೇ ಸಾರುತ್ತಿದ್ದವರು. ಬಡತನದಲ್ಲೇ ಹುಟ್ಟಿ ಬಡತನದಲ್ಲೇ ಬೆಳೆದ್ದರಿಂದ ಮೂರನೇ ತರಗತಿವರೆಗೆ ಮಾತ್ರ ಓದಿದ್ದರು. ನೇಕಾರಿಕೆ ಕಲಿತು ಜೀವನ ನಡೆಸುತ್ತಿದ್ದರು. ಕುರಾನ್ ಅಧ್ಯನ ಮಾಡಿದರು. ಬೇರೆ ಧರ್ಮಗಳನ್ನ ತಿಳಿಯುತ್ತಿದ್ದರು. ಭಜನಾಸಂಘಗಳಲ್ಲಿ ಭಾಗವಹಿಸಿ ವಚನ, ತತ್ವಪದಗಳನ್ನೆಲ್ಲಾ ಕಲಿತರು. ಆ ಮೂಲಕವೆರ ಭಾವೈಕ್ಯತೆಯನ್ನ ಸಾರುತ್ತಿದ್ದರು. ಆದ್ರೆ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!