Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ 13 ಲಕ್ಷ ರೂ. ವೆಚ್ಚದ ಶಾಸಕರ ನೂತನ ಕಾರ್ಯಾಲಯ ಉದ್ಘಾಟನೆ : ಕುಡಿಯುವ ನೀರು, ಸ್ವಚ್ಛತೆಗೆ ವೀರೇಂದ್ರ ಪಪ್ಪಿ ಸೂಚನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 06 : ನಗರಸಭೆಯಲ್ಲಿ ಶಾಸಕರ ನೂತನ ಕಾರ್ಯಾಲಯವನ್ನು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬುಧವಾರ ಉದ್ಘಾಟಿಸಿದರು.

ನಗರಸಭೆ ಸಾಮಾನ್ಯ ನಿಧಿ ಹದಿಮೂರು ಲಕ್ಷ ರೂ.ವೆಚ್ಚದಲ್ಲಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಶಾಸಕರು ಬೇಸಿಗೆ ಆರಂಭವಾಗಿರುವುದರಿಂದ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. 35 ವಾರ್ಡ್‍ಗಳಲ್ಲಿಯೂ ಸ್ವಚ್ಚತೆಯನ್ನು ಕಾಪಾಡಬೇಕು. ಮೂಲಭೂತ ಸೌಕರ್ಯಗಳಾದ ಬೀದಿ ದೀಪ, ರಸ್ತೆ, ಚರಂಡಿ ಕುಡಿಯುವ ನೀರು ಪೂರೈಕೆಗೆ ಒತ್ತು ಕೊಡಲಾಗುವುದು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿಯೇ ಕಾರ್ಯಾಲಯ ತೆರೆಯಲಾಗಿದೆ. ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

 

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹಾಸ್ಯ ನಟ ದೊಡ್ಡಣ್ಣ, ನಗರಸಭೆ ಮಾಜಿ ಸದಸ್ಯ ಟಿ.ರಮೇಶ್, ಮಹೇಶ್, ಸೈಟ್ ಬಾಬಣ್ಣ ನಗರಸಭೆ ಪೌರಾಯುಕ್ತೆ ಲಕ್ಷ್ಮಿ, ಪ್ರಥಮ ದರ್ಜೆ ಗುತ್ತಿಗೆದಾರ ಬ್ಯಾಲಾಳ್ ಜಯಣ್ಣ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...