Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿರಾಟ್ ಕೊಹ್ಲಿ ಆಪ್ತ ಸ್ನೇಹಿತ ಅಕಾಲಿಕ ನಿಧನ; 36ರಲ್ಲೇ ಮಾಜಿ ಕ್ರಿಕೆಟಿಗ ಕೊನೆಯುಸಿರು!

---Advertisement---

ಟೀಮ್ ಇಂಡಿಯಾ ಪರ ಆಡಿದ್ದ ಮಾಜಿ ಕ್ರಿಕೆಟಿಗ ಅಮನ್‌ಪ್ರೀತ್ ಸಿಂಗ್ ಗಿಲ್ ನಿಧನರಾಗಿದ್ದು, ಭಾರತೀಯ ಕ್ರಿಕೆಟ್ ವಲಯವನ್ನು ದುಃಖದ ಸಾಗರಕ್ಕೆ ತಳ್ಳಿದೆ. ಕೇವಲ 36ನೇ ವಯಸ್ಸಿನಲ್ಲಿ ಅವರು ಕೊನೆಯುಸಿರೆಳೆದಿರುವುದು ಅಭಿಮಾನಿಗಳು ಮತ್ತು ಆಟಗಾರರಿಗೆ ಆಘಾತ ಉಂಟುಮಾಡಿದೆ.ಮಾಜಿ ಅಂಡರ್-19 ಆಟಗಾರರಾಗಿದ್ದ ಅಮನ್‌ಪ್ರೀತ್ ಸಿಂಗ್ ಗಿಲ್, ವಿರಾಟ್ ಕೊಹ್ಲಿ ಅವರ ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಯುವ ಭಾರತ ತಂಡದಲ್ಲಿ ಒಟ್ಟಿಗೆ ಆಡಿದ್ದು, ಕ್ರಿಕೆಟ್ ಜೀವನದ ಆರಂಭದ ದಿನಗಳನ್ನು ಹಂಚಿಕೊಂಡಿದ್ದರು.

ಬುಧವಾರ ಚಂಡೀಗಢದಲ್ಲಿ ಅವರು ನಿಧನರಾಗಿದ್ದು, ಸಾವಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.ಅಮನ್‌ಪ್ರೀತ್ ಸಿಂಗ್ ಗಿಲ್ ಮೈದಾನದಲ್ಲಿ ಶಿಸ್ತಿನ ಮತ್ತು ಹೋರಾಟಗಾರ ಆಟಗಾರನಾಗಿ ಗುರುತಿಸಿಕೊಂಡಿದ್ದರು. 2007ರಲ್ಲಿ ಭಾರತ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದ ಅವರು ಐದು ಏಕದಿನ ಹಾಗೂ ಒಂದು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಶ್ರೀಲಂಕಾದ ಆಲ್‌ರೌಂಡರ್ ತಿಸಾರ ಪೆರೆರಾ ವಿಕೆಟ್ ಪಡೆಯುವ ಮೂಲಕ ಅವರು ಆಗಲೇ ಗಮನ ಸೆಳೆದಿದ್ದರು. ಆದರೆ, 2008ರ ವಿಶ್ವಕಪ್ ವಿಜೇತ ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ ಅವರಿಗೆ ಅವಕಾಶ ಸಿಗಲಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಿಕ ಅವತರಣಿಕೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಭಾಗವಾಗಿದ್ದ ಅಮನ್‌ಪ್ರೀತ್, ಬಳಿಕ ದೇಶೀಯ ಕ್ರಿಕೆಟ್‌ನಲ್ಲಿ ಪಂಜಾಬ್ ಪರ ಆರು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಆ ಅವಧಿಯಲ್ಲಿ 11 ವಿಕೆಟ್‌ಗಳನ್ನು ಪಡೆದು ಗಮನಾರ್ಹ ಪ್ರದರ್ಶನ ನೀಡಿದ್ದರು.ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕವೂ ಅವರು ಆಟದೊಂದಿಗೆ ನಂಟು ಉಳಿಸಿಕೊಂಡಿದ್ದರು. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್‌ನ ಹಿರಿಯ ಆಯ್ಕೆ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿ ಯುವ ಆಟಗಾರರನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

ಅವರ ನಿಧನಕ್ಕೆ ಪಂಜಾಬ್ ಕಿಂಗ್ಸ್ ತಂಡ ಹಾಗೂ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸಂತಾಪ ಸೂಚಿಸಿದೆ. ಪಂಜಾಬ್ ಕಿಂಗ್ಸ್ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದು ಗೌರವ ಸಲ್ಲಿಸಿದ್ದಾರೆ ಎನ್ನಲಾಗಿದೆ.ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಕೂಡ ಅಮನ್‌ಪ್ರೀತ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. “ನಮ್ಮ ವೃತ್ತಿಜೀವನದ ಆರಂಭದ ದಿನಗಳಲ್ಲಿ ನಾವು ಒಟ್ಟಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದೆವು. ಅವರು ಅತ್ಯಂತ ಶ್ರಮಜೀವಿ ಆಟಗಾರರಾಗಿದ್ದರು” ಎಂದು ಯುವರಾಜ್ ಸಿಂಗ್ ಸ್ಮರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now