ಸುದ್ದಿಒನ್,ಬೆಂಗಳೂರು, ಮೇ.08 : ರಾಜ್ಯದಲ್ಲಿ ಇ-ಸ್ವತ್ತು (E-Swathu) ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ಎದುರಿಸುತ್ತಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಅಡಚಣೆಗಳನ್ನು ನಿವಾರಿಸಿ, ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಇ-ಸ್ವತ್ತು ಸೌಲಭ್ಯದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಅರ್ಜಿಗಳ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಆದರೆ, ತಾಂತ್ರಿಕ ತೊಂದರೆಗಳು ಮತ್ತು ದಾಖಲೆ ಪರಿಶೀಲನೆಯಲ್ಲಿನ ಸಂಕೀರ್ಣತೆಯಿಂದಾಗಿ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಯುದ್ಧೋಪಾದಿಯಲ್ಲಿ ವಿಲೇವಾರಿ ಮಾಡಲು ಸಚಿವರು ನಿರ್ದೇಶನ ನೀಡಿದ್ದಾರೆ.

ಇ-ಸ್ವತ್ತು ಅರ್ಜಿಗಳ ಪ್ರಕ್ರಿಯೆಗೆ ವೇಗ ನೀಡಿ, ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ಹಕ್ಕುಪತ್ರ ಸಿಗುವಂತೆ ಮಾಡುವುದು. ದಾಖಲೆಗಳ ಪರಿಶೀಲನಾ ವಿಧಾನವನ್ನು ಸರಳಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ತಪ್ಪಿಸುವುದು. ತಂತ್ರಾಂಶದಲ್ಲಿ ಕಂಡುಬರುತ್ತಿರುವ ಲೋಪದೋಷಗಳನ್ನು ಸರಿಪಡಿಸಿ, ಅತ್ಯಾಧುನಿಕ ತಾಂತ್ರಿಕ ಬದಲಾವಣೆಗಳನ್ನು ತರುವುದು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನರಿಗೆ ಮಾಹಿತಿ ನೀಡಲು ಜಾಗೃತಿ ಮೂಡಿಸುವುದು ಮತ್ತು ಸಹಾಯ ಕೇಂದ್ರಗಳನ್ನು ಹೆಚ್ಚು ಕ್ರಿಯಾಶೀಲಗೊಳಿಸುವುದು.ಸಾರ್ವಜನಿಕರು ಇ-ಸ್ವತ್ತು ಸೇವೆಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು. ತಾಂತ್ರಿಕ ತೊಡಕುಗಳನ್ನು ಶೀಘ್ರವಾಗಿ ನಿವಾರಿಸಿ, ವ್ಯವಸ್ಥೆಯನ್ನು ಸಂಪೂರ್ಣವಾಗಿ ಜನಸ್ನೇಹಿಗೊಳಿಸಬೇಕು, ಎಂದು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











