ಸುದ್ದಿಒನ್, ಚಿತ್ರದುರ್ಗ,ಮೇ.08: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಐತಿಹಾಸಿಕ ‘ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ.
ನಾಳೆ, (ಮೇ 9ರ ಶನಿವಾರ) ಮಧ್ಯಾಹ್ನ 1:00 ಗಂಟೆಗೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ.

ಸುಗಮ ಸಂಚಾರಕ್ಕೆ ವಿಶೇಷ ಕ್ರಮ :
ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆಯಲ್ಲಿ ಅಚ್ಚುಕಟ್ಟು ಕ್ರಮ ಕೈಗೊಳ್ಳಲಾಗಿದೆ. ವಾಹನಗಳ ನಿಲುಗಡೆಗೆ (Parking) ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ಪಡೆಯಲು ಬಿಜೆಪಿ ವತಿಯಿಂದ ಕ್ಯೂಆರ್ ಕೋಡ್ (QR Code) ಬಿಡುಗಡೆ ಮಾಡಲಾಗಿದೆ.
ಮಾಹಿತಿ ಪಡೆಯುವುದು ಹೇಗೆ?
ಪೋಸ್ಟರ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ನಿಗದಿತ ಪಾರ್ಕಿಂಗ್ ಸ್ಥಳಗಳ ವಿವರ ಮತ್ತು ಲೊಕೇಶನ್ ಮಾಹಿತಿಯನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಬಹುದು.
ಸ್ಥಳ: ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗ.
ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮಿಸಲು ಈ ಕಾರ್ಯಕ್ರಮವು ಸಾಕ್ಷಿಯಾಗಲಿದ್ದು, ಬಿಜೆಪಿ ನಾಯಕರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಚಿತ್ರದುರ್ಗದಲ್ಲಿ ನಡೆಯಲಿರುವ ಐತಿಹಾಸಿಕ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿನ ವಾಹನ ನಿಲುಗಡೆ ಮಾಹಿತಿಯನ್ನು QR ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಿರಿ ಅಥವಾ ಈ ಲಿಂಕ್ ಬಳಸಿ ಪಡೆದುಕೊಳ್ಳಿ…
ಬನ್ನಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸೋಣ ಕರುನಾಡ ಜನನಾಯಕನನ್ನು ಗೌರವಿಸೋಣ.https://t.co/6NdBehcz5s#BSYಅಭಿಮಾನೋತ್ಸವ… pic.twitter.com/Rj4vBqlpgy
— BJP Karnataka (@BJP4Karnataka) May 8, 2026




















