Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಜೈನ ಸಂಪ್ರದಾಯದಂತೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ

---Advertisement---

ಸುದ್ದಿಒನ್,ಚಿತ್ರದುರ್ಗ,ಮೇ.11: ಅಕಾಲಿಕ ನಿಧನರಾದ ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರ ಇಂದು ಅವರ ತವರು ಕ್ಷೇತ್ರವಾದ ಚಳ್ಳಕೆರೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಬೆಳಿಗ್ಗೆ ಚಳ್ಳಕೆರೆಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ ನಂತರ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಸ್ಟೇಡಿಯಂಗೆ ಸ್ಥಳಾಂತರಿಸಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ದರ್ಶನ ಪಡೆದಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿ ಅಂತಿಮ ನಮನ ಸಲ್ಲಿಸಲಿದ್ದಾರೆ. ಸಚಿವ ಸುಧಾಕರ್ ಅವರ ಪುತ್ರ ಸುಹಾಸ್ ಮಾಹಿತಿ ನೀಡಿರುವಂತೆ, ಮಧ್ಯಾಹ್ನ 4 ಗಂಟೆಗೆ ಪಾವಗಡ ರಸ್ತೆಯ ಜೈನ ಮುಕ್ತಿಧಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.ಜೈನ ಧರ್ಮದ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಕೋರಲಾಗುವುದು. ಪುತ್ರ ಸುಹಾಸ್ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now