ಸುದ್ದಿಒನ್,ಮೈಸೂರು,ಮೇ.14: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಶಾಲಾ ಸಮವಸ್ತ್ರ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2022ರ ಸಮವಸ್ತ್ರ ಆದೇಶವನ್ನು ಹಿಂಪಡೆದಿರುವ ಸರ್ಕಾರ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹೊಸ ಆದೇಶದಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿರುವುದು ಈಗ ರಾಜ್ಯಾದ್ಯಂತ ಚರ್ಚೆಗೆ ಹಾಗೂ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದೆ.
ಸರ್ಕಾರದ ಹೊಸ ಆದೇಶದ ಪ್ರಕಾರ, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ತಮ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಕೆಲವು ಧಾರ್ಮಿಕ ವಸ್ತುಗಳನ್ನು ಧರಿಸಲು ಮುಕ್ತ ಅವಕಾಶ ನೀಡಲಾಗಿದೆ. ಇದರಲ್ಲಿ ಪ್ರಮುಖವಾಗಿ ಹಿಜಾಬ್, ಜನಿವಾರ, ಶಿವದಾರ / ಉಡದಾರ, ರುದ್ರಾಕ್ಷಿ ಹಾಗೂ ಪೇಟ ಅವಕಾಶ ನೀಡಲಾಗಿದೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. “ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಅವರವರ ಧರ್ಮಕ್ಕೆ ಸಂಬಂಧಿಸಿದ ಸಾಂಪ್ರದಾಯಿಕ ವಸ್ತುಗಳನ್ನು ಧರಿಸಲು ಅಭ್ಯಂತರವಿಲ್ಲ. ಆದರೆ, ಕೇಸರಿ ಶಾಲು ಧರಿಸಲು ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ಅವರು ಖಡಕ್ ಆಗಿ ತಿಳಿಸಿದ್ದಾರೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹೊಸ ರೂಪದ ಪೇಟಗಳಿಗೂ ಅನುಮತಿ ಇಲ್ಲ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











